23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಜಿರೆ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರೇ ಹಣ ಕಳೆದು ಕೊಂಡವರಾಗಿದ್ದಾರೆ. ಇವರ ಊರಾದ ಗುಲ್ಬರ್ಗ ಜಿಲ್ಲೆಯ ಅಫ್ಜಲ್ ಪುರದ ಯೂನಿಯನ್ ಬ್ಯಾಂಕಿನ‌ ಖಾತೆಯಿಂದ ಹಣ ಅಪಹರಿಸಲಾಗಿದೆ.

ಮೇ 23 ರ ವರೆಗೆ ಇವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30 ರ ಬಳಿಕ ಇವರ ಮೊಬೈಲ್ ಗೆ ಎಸ್. ಎಂ.ಎಸ್.ಗಳು ಬಂದಿದ್ದು, ಒಟಿಪಿ ಬಂದಿದೆ. ಇದಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದರೆ ಬೆಳಿಗ್ಗೆ ಪರಿಶೀಲಿಸಿದಾಗ ಅವರ ಖಾತೆಯಲ್ಲಿದ್ದ ರೂ 3,14,000 ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆ ಗೊಂಡಿರುವುದು ಕಂಡುಬರುತ್ತಿದೆ. ಎಂದು ಅವರು ಬೆಳ್ತಂಗಡಿ ಪೋಲಿಸರಿಗೆ ದೂರು ನೀಡಲಾಗಿದ್ದಾರೆ. ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related posts

ಧರ್ಮಸ್ಥಳದಲ್ಲಿ ಚಲನಚಿತ್ರ ನಟ ಅನಿರುದ್ಧ್ ಜಟ್ಕರ್ ಆಮಂತ್ರಣ ಸೇವಾ ಪ್ರತಿಷ್ಠಾನದ ಲಾಂಛನ ಬಿಡುಗಡೆ

Suddi Udaya

ಉಪ್ಪಿನಂಗಡಿ: ಪರವಾನಿಗೆ ಇಲ್ಲದೇ ಮರದ ದಿಮ್ಮಿಗಳ ಸಾಗಾಟ: ಆರೋಪಿ ಬಂಧನ, ಲಾರಿ ಪೊಲೀಸ್ ವಶಕ್ಕೆ

Suddi Udaya

ಧರ್ಮಸ್ಥಳ ಯೂನಿಯನ್ ಬ್ಯಾಂಕ್ ಎಟಿಎಂ ಬಳಿ, ನಿಲ್ಲಿಸಿದ್ದ ರೂ.1.50 ಲಕ್ಷ ಮೌಲ್ಯದ ಸ್ಪ್ಲೆಂಡರ್ ಪ್ಲಸ್ ಮೋಟಾರ್‌ ಸೈಕಲ್‌ ಕಳವು

Suddi Udaya

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಲೆಕುಡಿಯರ ವಾರ್ಷಿಕ ಸಮಾವೇಶ

Suddi Udaya

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya
error: Content is protected !!