25.5 C
ಪುತ್ತೂರು, ಬೆಳ್ತಂಗಡಿ
April 24, 2026
ಸಮಸ್ಯೆ

ಕೊಕ್ಕಡ, ಸೌತಡ್ಕ,ಕಾಪಿನ ಬಾಗಿಲು ರಸ್ತೆಯಲ್ಲಿ ಬೆಳಿಗ್ಗೆಯೇ ಟ್ರಾಫಿಕ್ ಜಾಮ್: ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣ

ಬೆಳ್ತಂಗಡಿ: ಕಾಪಿನ ಬಾಗಿಲಿನಿಂದ ಸೌತಡ್ಕದ ವರೆಗೆ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಇಂದು ಆದಿತ್ಯವಾರ ಆಗಿರುವುದರಿಂದ ಪ್ರವಾಸಿಗರು ಪುಣ್ಯ ಕ್ಷೇತ್ರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು, ಕಾಪಿನಬಾಗಿಲು, ಸೌತಡ್ಕ ರಸ್ತೆಯಲ್ಲಿ ಕೊಕ್ಕಡದವರೆಗೆ ಪೂರ್ಣ ಟ್ರಾಫಿಕ್ ಜಾಮ್ ಆಗಿದೆ.

ಇದರಿಂದಾಗಿ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ದೂರದ ಊರಿಗೆ ಹೋಗುವವರು, ಬಾಡಿಗೆಗೆ ಹೋಗುವ ವಾಹನಗಳು ಗಂಟೆಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಸೌತಡ್ಕ ದ್ವಾರದ ಬಳಿ ಇಕ್ಕಾಟ್ಟಾದ ಸ್ಥಳ ಮತ್ತು ಇಲ್ಲಿ ಯಾವುದೇ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿ ವಾರದ ಶನಿವಾರ , ಆದಿತ್ಯವಾರ ಇಲ್ಲಿ ಚಾಲಕರು ಸಂಕಷ್ಟ ಅನುಭವಿಸುತ್ತಿದ್ದಾರೆ.

Related posts

ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ಹೋಟೆಲ್ ಉದ್ಯಮಕ್ಕೆ ಪೆಟ್ಟು ಹಾಸ್ಟೇಲ್, ಕ್ಯಾಂಟಿನ್‌ಗೆ ಸಂಕಷ್ಟ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಇನ್ನೂ ಡಾಮರೀಕರಣ ಕಾಣದ ಲಾಯಿಲ ಗ್ರಾ.ಪಂ. ವ್ಯಾಪ್ತಿಯ ರಸ್ತೆಗಳು

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಬೆಳ್ತಂಗಡಿ: ನ್ಯಾಯಾಲಯಕ್ಕೆ ಹಾಜರಾಗದ ಅಂತರ್ ರಾಜ್ಯ ಕಳ್ಳನ ಬಂಧನ

Suddi Udaya

ಪುಂಜಾಲಕಟ್ಟೆ – ಉಲ೯ ರಸ್ತೆ ಗಂಪದಡ್ಡ ಪ್ರದೇಶದಲ್ಲಿ ಕುಸಿಯುವ ಭೀತಿ:ಶೀಘ್ರ ದುರಸ್ತಿಗೆ ಆಗ್ರಹಿಸಿ”ಕನ್ನಡಸೇನೆ-ಕರ್ನಾಟಕ” ತಾಲೂಕು ಸಮಿತಿಯಿಂದ ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ

Suddi Udaya
error: Content is protected !!