ಶಿರ್ಲಾಲು ಸಿಎ ಬ್ಯಾಂಕಿನಿಂದ ಎಸ್.ಎಸ್.ಎಲ್.ಸಿ ಸಾಧಕ‌ ವಿದ್ಯಾರ್ಥಿನಿ ತ್ರಿಷಾರವರಿಗೆ ಸನ್ಮಾನ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ‌ ಸಂಘ ಶಿರ್ಲಾಲು ಇದರ ವತಿಯಿಂದ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿನಿ ತ್ರಿಷಾ ಅವರನ್ನು ಸನ್ಮಾನಿಸಲಾಯಿತು.

ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶ್ರೀರಾಮ ಶಾಲಾ ವಿದ್ಯಾರ್ಥಿನಿ ತ್ರಿಷಾ ಅವರು 615 ಅಂಕ ಗಳಿಸಿ ಕಲಿತ ಶಾಲೆಗೆ, ಊರಿಗೆ ಕೀರ್ತಿ ತಂದಿದ್ದು ಅವರನ್ನು ಸನ್ಮಾನಿಸಲಾಯಿತು.ಇವರು ಶಿರ್ಲಾಲು ಗ್ರಾಮದ ಹೊಸಮನೆ ಶ್ರೀಮತಿ ಯಶೋಧ ಮತ್ತು ಸತೀಶ್ ಪೂಜಾರಿ ದಂಪತಿ ಪುತ್ರಿ.ಈ ಸಂದರ್ಭದಲ್ಲಿ ಶಿರ್ಲಾಲು ಸಿಎ ಬ್ಯಾಂಕಿನ ಅಧ್ಯಕ್ಷ ನವೀನ್ ಸಾಮಾನಿ,ಉಪಾಧ್ಯಕ್ಷ ತಾರಾನಾಥ ಗೌಡ,ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್, ನಿವೃತ್ತ ಸಿಇಓ ನಿತ್ಯಾನಂದ ಶೆಟ್ಟಿ ನೊಚ್ಚ ಹಾಗೂ ನಿರ್ದೇಶಕರುಗಳು, ಬ್ಯಾಂಕಿನ‌ ಸಿಬ್ಬಂದಿಗಳು ಮೊದಲಾದವರು ಉಪಸ್ಥಿತರಿದ್ದರು.

Leave a Comment

error: Content is protected !!