24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಜಿರೆ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರೇ ಹಣ ಕಳೆದು ಕೊಂಡವರಾಗಿದ್ದಾರೆ. ಇವರ ಊರಾದ ಗುಲ್ಬರ್ಗ ಜಿಲ್ಲೆಯ ಅಫ್ಜಲ್ ಪುರದ ಯೂನಿಯನ್ ಬ್ಯಾಂಕಿನ‌ ಖಾತೆಯಿಂದ ಹಣ ಅಪಹರಿಸಲಾಗಿದೆ.

ಮೇ 23 ರ ವರೆಗೆ ಇವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30 ರ ಬಳಿಕ ಇವರ ಮೊಬೈಲ್ ಗೆ ಎಸ್. ಎಂ.ಎಸ್.ಗಳು ಬಂದಿದ್ದು, ಒಟಿಪಿ ಬಂದಿದೆ. ಇದಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದರೆ ಬೆಳಿಗ್ಗೆ ಪರಿಶೀಲಿಸಿದಾಗ ಅವರ ಖಾತೆಯಲ್ಲಿದ್ದ ರೂ 3,14,000 ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆ ಗೊಂಡಿರುವುದು ಕಂಡುಬರುತ್ತಿದೆ. ಎಂದು ಅವರು ಬೆಳ್ತಂಗಡಿ ಪೋಲಿಸರಿಗೆ ದೂರು ನೀಡಲಾಗಿದ್ದಾರೆ. ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related posts

ಗೇರುಕಟ್ಟೆ: ಸ್ಥಳೀಯ ಯುವಕರ ತಂಡದಿಂದ ರಸ್ತೆ ದುರಸ್ಥಿ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಸಮಾಜ ಸೇವೆ ಮುಖೇನಾ ಗುರುತಿಸಿಕೊಂಡಿರುವ ಉಜಿರೆ ಬದುಕು ಕಟ್ಟೋಣ ಸೇವಾ ಟ್ರಸ್ಟ್ ಸಂಚಾಲಕ,ಉದ್ಯಮಿ ಮೋಹನ್ ಕುಮಾರ್ ಗೆ ಪ್ರತಿಷ್ಠಿತ ಶ್ರೀ ಮಂತ್ರಾಲಯಂ ಪರಿಮಳ ಪ್ರಶಸ್ತಿ-2024 ಪ್ರದಾನ

Suddi Udaya

ಬಳಂಜ ಬೀಳುವ ಹಂತದಲ್ಲಿದ್ದ ಮನೆಯನ್ನು ಸರಿಪಡಿಸಿದ ಗ್ರಾಮಸ್ಥರು, ಸತೀಶ್ ದೇವಾಡಿಗರ ಸೇವಾ ಮನೋಭಾವ ಶ್ಲಾಘನೀಯ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya

ಆರೋಗ್ಯ ಸಮಸ್ಯೆಯಿಂದ ಬಳಲಿ ಗುಣಮುಖರಾಗುತ್ತಿರುವ ಗಿಂಡಾಡಿ ಗುರುರಾಜ್ ಹೆಗ್ಡೆಯವರಿಗೆ ಅಳದಂಗಡಿ ಪ್ರಾ.ಕೃ.ಪ.ಸ. ಸಂಘದಿಂದ ರೂ. 50 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya
error: Content is protected !!