23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಜಿರೆ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರೇ ಹಣ ಕಳೆದು ಕೊಂಡವರಾಗಿದ್ದಾರೆ. ಇವರ ಊರಾದ ಗುಲ್ಬರ್ಗ ಜಿಲ್ಲೆಯ ಅಫ್ಜಲ್ ಪುರದ ಯೂನಿಯನ್ ಬ್ಯಾಂಕಿನ‌ ಖಾತೆಯಿಂದ ಹಣ ಅಪಹರಿಸಲಾಗಿದೆ.

ಮೇ 23 ರ ವರೆಗೆ ಇವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30 ರ ಬಳಿಕ ಇವರ ಮೊಬೈಲ್ ಗೆ ಎಸ್. ಎಂ.ಎಸ್.ಗಳು ಬಂದಿದ್ದು, ಒಟಿಪಿ ಬಂದಿದೆ. ಇದಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದರೆ ಬೆಳಿಗ್ಗೆ ಪರಿಶೀಲಿಸಿದಾಗ ಅವರ ಖಾತೆಯಲ್ಲಿದ್ದ ರೂ 3,14,000 ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆ ಗೊಂಡಿರುವುದು ಕಂಡುಬರುತ್ತಿದೆ. ಎಂದು ಅವರು ಬೆಳ್ತಂಗಡಿ ಪೋಲಿಸರಿಗೆ ದೂರು ನೀಡಲಾಗಿದ್ದಾರೆ. ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related posts

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ಉಜಿರೆ ಎಸ್‌.ಡಿ.ಎಂ. ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಸ್ಕಾರ್ಫ್ ದಿನಾಚರಣೆ

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ಧರ್ಮಸ್ಥಳ: ಕೇಶವ ಗಾಣಿಗ ನಿಧನ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಬಳಂಜ ಪಂಚಶ್ರೀ ಮಹಿಳಾ ಭಜನಾ ಮಂಡಳಿಯಿಂದ ಓಡಿಲ್ನಾಳ ಕ್ಷೇತ್ರದಲ್ಲಿ ಭಜನಾ ಸೇವೆ

Suddi Udaya
error: Content is protected !!