September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ‌ ಖಾತೆಯಿಂದ ರೂ. 3.14ಲಕ್ಷ ನಗದು ಅಪಹರಣ

ಬೆಳ್ತಂಗಡಿ; ಉಜಿರೆಯ ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಯ ಬ್ಯಾಂಕ್ ಖಾತೆ ಯಿಂದ ಅಪರಿಚಿತರು 3.14 ಲಕ್ಷ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಉಜಿರೆ ಬಿ.ಎನ್.ವೈ ಎಸ್ ಕಾಲೇಜಿನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಯಾಗಿರುವ ಪ್ರದೀಪ್ ಸುರೇಶ್ ರೂಗಿ ಎಂಬವರೇ ಹಣ ಕಳೆದು ಕೊಂಡವರಾಗಿದ್ದಾರೆ. ಇವರ ಊರಾದ ಗುಲ್ಬರ್ಗ ಜಿಲ್ಲೆಯ ಅಫ್ಜಲ್ ಪುರದ ಯೂನಿಯನ್ ಬ್ಯಾಂಕಿನ‌ ಖಾತೆಯಿಂದ ಹಣ ಅಪಹರಿಸಲಾಗಿದೆ.

ಮೇ 23 ರ ವರೆಗೆ ಇವರ ಖಾತೆಯಲ್ಲಿ ಹಣವಿತ್ತು. ರಾತ್ರಿ 8.30 ರ ಬಳಿಕ ಇವರ ಮೊಬೈಲ್ ಗೆ ಎಸ್. ಎಂ.ಎಸ್.ಗಳು ಬಂದಿದ್ದು, ಒಟಿಪಿ ಬಂದಿದೆ. ಇದಕ್ಕೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಆದರೆ ಬೆಳಿಗ್ಗೆ ಪರಿಶೀಲಿಸಿದಾಗ ಅವರ ಖಾತೆಯಲ್ಲಿದ್ದ ರೂ 3,14,000 ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆ ಗೊಂಡಿರುವುದು ಕಂಡುಬರುತ್ತಿದೆ. ಎಂದು ಅವರು ಬೆಳ್ತಂಗಡಿ ಪೋಲಿಸರಿಗೆ ದೂರು ನೀಡಲಾಗಿದ್ದಾರೆ. ಪೊಲೀಸರು ಪ್ರಕರಣ‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ

Related posts

ದಯಾ ವಿಶೇಷ ಶಾಲೆಯಲ್ಲಿ ದಿ.ಕೆ. ವಸಂತ ಬಂಗೇರರವರ 80ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ನಾಲ್ಕೂರು: ಸೂಳಬೆಟ್ಟು ನಿವಾಸಿ ಪ್ರತಿಭಾ ಜೋಶಿ ನಿಧನ

Suddi Udaya

ಬೆಳ್ತಂಗಡಿ: ವಲಯ ಮಟ್ಟದ ಅಂತರಾಷ್ಟ್ರೀಯ ಮಹಿಳಾ ಸಮಾವೇಶ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ಸಿಯೋನ್ ಆಶ್ರಮದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!