April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ ಒಬ್ಬನೇ ಮಗನಾಗಿರುವ ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಕೃಷಿ ಕೆಲಸ ಮಾಡಿಕೊಂಡಿರುವ ಶೈಲೇಶ್ ಶೆಟ್ಟಿ(38) ಎಂಬವರು ತನ್ನ ಮನೆಯ ಕೆರೆಗೆ ಮೇ.25 ರಂದು ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಸ್ವಚ್ಛತಾ ಹಿ ಸೇವಾ’ ಸಪ್ತಾಹ ಕಾರ್ಯಕ್ರಮ

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಅ. ಪ್ರೌಢಶಾಲೆಯ ವಿದ್ಯಾರ್ಥಿ ಜಾಹ್ನವಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಮಠದಲ್ಲಿ ಶಿರೂರು ಮಠದ ಪೀಠಾಧಿಪತಿಗಳಿಂದ ವಿಶೇಷ ಪ್ರವಚನ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!