37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ ಒಬ್ಬನೇ ಮಗನಾಗಿರುವ ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಕೃಷಿ ಕೆಲಸ ಮಾಡಿಕೊಂಡಿರುವ ಶೈಲೇಶ್ ಶೆಟ್ಟಿ(38) ಎಂಬವರು ತನ್ನ ಮನೆಯ ಕೆರೆಗೆ ಮೇ.25 ರಂದು ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.

Related posts

ತಾಲೂಕು ಭಜನಾ ಪರಿಷತ್ತಿನ ನೇತೃತ್ವದಲ್ಲಿ ತಾಲೂಕು ಕುಣಿತ ಭಜನಾ ತರಬೇತಿದಾರ ಪ್ರಥಮ ಸಭೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕವಿ ಸರ್ವಜ್ಞ ಜಯಂತಿ ಆಚರಣೆ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲದ 35ನೇ ವರ್ಷದ ವಾರ್ಷಿಕೋತ್ಸವ

Suddi Udaya
error: Content is protected !!