July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮತ್ತು ಹರ್ಷೇಂದ್ರ ಕುಮಾರ್ ಅವರ ನಿರ್ದೇಶನದಂತೆ ಪ್ರತಿ ತಿಂಗಳು ಉಚಿತ ರೋಗ ತಪಾಸಣಾ ಶಿಬಿರದಲ್ಲಿ ನಡೆಯುತ್ತಿದ್ದು, ಮೇ26 ರಂದು ಚರ್ಮರೋಗ ತಪಾಸಣಾ ಶಿಬಿರ ನಡೆಸಲಾಯಿತು.


ಈ ಶಿಬಿರದಲ್ಲಿ ಚರ್ಮದ ಕಲೆಗಳು, ಕಪ್ಪು ಕಲೆಗಳು, ಕೂದಲು ಉದುರುವಿಕೆ ಮತ್ತು ತಲೆಹೊಟ್ಟು, ಮಕ್ಕಳ ಚರ್ಮದ ತೊಂದರೆಗಳು, ಸೌಂದರ್ಯದ ಸಮಸ್ಯೆಗಳು, ಕುಷ್ಠರೋಗ ಸಮಸ್ಯೆ, ಗಾಯದ ಗುರುತುಗಳು, ಮೊಡವೆಗಳಿಗೆ ಚಿಕಿತ್ಸೆ, ಇಸುಬು, ಡ್ರಗ್ ಅಲರ್ಜಿ, ಸೋರಿಯಾಸಿಸ್, ತೊನ್ನುರೋಗ (ಬಿಳಿ ಮಚ್ಚೆ), ತುರಿಕೆ ಖಜ್ಜಿ, ಉಗುರು ಸಂಬಂಧಿತ ರೋಗಗಳ ತಪಾಸಣೆಯನ್ನು ಉಚಿತವಾಗಿ ನಡೆಸಲಾಯಿತು.


ಚರ್ಮರೋಗ ತಜ್ಞರಾದ ಡಾ| ಭವಿಷ್ಯ ಕೆ. ಶೆಟ್ಟಿMBBS., MD, DNB (DVL) ಶಿಬಿರ ಉದ್ಘಾಟಿಸಿ, ರೋಗಿಗಳ ತಪಾಸಣೆ ನಡೆಸಿದರು. ಶಿಬಿರದಲ್ಲಿ ರೋಗ ತಪಾಸಣೆ ಉಚಿತವಾಗಿತ್ತು. ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ನೀಡಲಾಗಿತ್ತು. ಶಿಬಿರದಲ್ಲಿ 200 ಕ್ಕೂ ಅಧಿಕ ಮಂದಿ ಭಾಗವಹಿಸಿ ಶಿಬಿರದ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪ್ರಾ. ಆ. ಕೇಂದ್ರದ ಹಿರಿಯ ಮಹಿಳಾ ಆರೋಗ್ಯ ಸುರಕ್ಷಾಧಿಕಾರಿ ವಿಜಯಲಕ್ಷ್ಮಿ ಕೆ. ಎಸ್. ಸೇವಾ ನಿವೃತ್ತಿ.

Suddi Udaya

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿವಾದ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕರಾವಳಿ ಭಾಗದ ಶಾಸಕರು ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಮಚ್ಚಿನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಮಡಂತ್ಯಾರ್ ವಲಯ ದಿಂದ ಸಾರ್ವಜನಿಕ ಪೂಜೆ

Suddi Udaya
error: Content is protected !!