September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಇವರ ಸಹಕಾರದೊಂದಿಗೆ ಜೂ 01 ರಂದು ಶನಿವಾರ ಪೂರ್ವಾಹ್ನ 10-30 ರಿಂದ ಬಿದಿರು ಕೃಷಿ ಮಾಹಿತಿ ಹಾಗೂ ಬಿದಿರು ತೋಟ ಭೇಟಿ ಕಾರ್ಯಕ್ರಮವನ್ನು ಅಪ್ಪೆಲ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನ, ಅಪ್ಪೆಲ ಬಯಲು ನೆರಿಯಾ ಇಲ್ಲಿ ಏರ್ಪಡಿಸಲಾಗಿದೆ.

ನೊಂದಾಯಿಸಿಕೊಂಡ 50 ಜನ ಕೃಷಿಕರಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಕಾರ್ಯಕ್ರಮದಲ್ಲಿ ಬಿದಿರು ಸೊಸೈಟಿ ಆಫ್ ಇಂಡಿಯಾ ಇಲ್ಲಿನ ತಜ್ಞರು ಬಿದಿರು ಕೃಷಿ ವಿಧಾನ ಮತ್ತು ಬಿದಿರು ಉತ್ಪನ್ನ ಮಾರಾಟ ಅವಕಾಶದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಆಸಕ್ತರು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಕೇಂದ್ರ ಕಛೇರಿಯನ್ನು ಸಂಪರ್ಕಿಸಿ, ಪ್ರವೇಶ ಶುಲ್ಕ ರೂ 100/- ಮಾತ್ರ ನೀಡಿ ಹೆಸರು ನೋಂದಾಯಿಸಲು ಅವಕಾಶವಿರುತ್ತದೆ. ಪ್ರಥಮವಾಗಿ ನೋಂದಾಯಿಸಿಕೊಂಡ 50 ಕೃಷಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಕ್ಕಾಗಿ 08256-200183, 200783

Related posts

ಕಳೆಂಜ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

Suddi Udaya

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಬೆಳ್ತಂಗಡಿ:ರಬ್ಬರ್ ಕೃಷಿ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya

ನಿಡ್ಲೆ: ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಆಟೋಚಾಲಕ

Suddi Udaya

ಕಾವಳಮುಡೂರು ಧೂಮಳಿಕೆ ನಿರ್ಮಾಣ ಹಂತದ ಮನೆಯಲ್ಲಿ, ಜಾನುವಾರು ವಧೆ ಪೊಲೀಸ್ ದಾಳಿ ಆರೋಪಿಗಳು ಪರಾರಿ

Suddi Udaya
error: Content is protected !!