23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಇವರ ಸಹಕಾರದೊಂದಿಗೆ ಜೂ 01 ರಂದು ಶನಿವಾರ ಪೂರ್ವಾಹ್ನ 10-30 ರಿಂದ ಬಿದಿರು ಕೃಷಿ ಮಾಹಿತಿ ಹಾಗೂ ಬಿದಿರು ತೋಟ ಭೇಟಿ ಕಾರ್ಯಕ್ರಮವನ್ನು ಅಪ್ಪೆಲ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನ, ಅಪ್ಪೆಲ ಬಯಲು ನೆರಿಯಾ ಇಲ್ಲಿ ಏರ್ಪಡಿಸಲಾಗಿದೆ.

ನೊಂದಾಯಿಸಿಕೊಂಡ 50 ಜನ ಕೃಷಿಕರಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಕಾರ್ಯಕ್ರಮದಲ್ಲಿ ಬಿದಿರು ಸೊಸೈಟಿ ಆಫ್ ಇಂಡಿಯಾ ಇಲ್ಲಿನ ತಜ್ಞರು ಬಿದಿರು ಕೃಷಿ ವಿಧಾನ ಮತ್ತು ಬಿದಿರು ಉತ್ಪನ್ನ ಮಾರಾಟ ಅವಕಾಶದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಆಸಕ್ತರು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಕೇಂದ್ರ ಕಛೇರಿಯನ್ನು ಸಂಪರ್ಕಿಸಿ, ಪ್ರವೇಶ ಶುಲ್ಕ ರೂ 100/- ಮಾತ್ರ ನೀಡಿ ಹೆಸರು ನೋಂದಾಯಿಸಲು ಅವಕಾಶವಿರುತ್ತದೆ. ಪ್ರಥಮವಾಗಿ ನೋಂದಾಯಿಸಿಕೊಂಡ 50 ಕೃಷಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಕ್ಕಾಗಿ 08256-200183, 200783

Related posts

ನೆರಿಯ : ಬಾಂದಡ್ಕ ಸೇಸಪ್ಪ ಗೌಡ ರವರ ಮನೆಯ ಹಿಂಭಾಗದ ಗುಡ್ಡ ಕುಸಿತ

Suddi Udaya

ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಪರಾಮರ್ಶೆ ಸಭೆಯಲ್ಲಿ ಭಿನ್ನಮತ ಸ್ಫೋಟ: ಎರಡು ಬಣಗಳ ನಡುವೆ ಮಾತಿನ ಚಕಮಕಿ: ಬೆಳ್ತಂಗಡಿ ಕಾಂಗ್ರೆಸ್ ಪಾಳಯದಲ್ಲಿ ಮತ್ತೆ ಬುಗಿಲೆದ್ದ ಭಿನ್ನಮತ

Suddi Udaya

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಕಲ್ಮಂಜ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya
error: Content is protected !!