23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಎಸ್.ಎಸ್.ಎಲ್.ಸಿ ಉತ್ತಮ ಅಂಕ ಪಡೆದ ಬೆಳ್ತಂಗಡಿ ವಿದ್ಯಾರ್ಥಿ ಸಿಮ್ರಾ ಪರ್ವೀನ್ ಳಿಗೆ ಸನ್ಮಾನ

ಬೆಳ್ತಂಗಡಿ: 2024-25ನೇ ಸಾಲಿನ ಕರ್ನಾಟಕ ರಾಜ್ಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 613 ಅಂಕ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಬೆಳ್ತಂಗಡಿ ಸಂಜಯ ನಗರ ನಿವಾಸಿ ಅಡ್ವೋಕೇಟ್ ಶೌಕತ್ ಆಲಿ ಹಾಗೂ ಸಫೀಯಾ ದಂಪತಿಯ ಪುತ್ರಿ “ಸಿಮ್ರಾ ಪರ್ವೀನ್” ಅವರಿಗೆ ವಿಮೆನ್ ಇಂಡಿಯಾ ಮೂವ್ಮೆಂಟ್ (WIM) ಬೆಳ್ತಂಗಡಿ ಸಮಿತಿ ವತಿಯಿಂದ ಮನೆಗೆ ತೆರಳಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವಿಮೆನ್ ಇಂಡಿಯಾ ಮೂವ್ಮೆಂಟ್ ಬೆಳ್ತಂಗಡಿ ಸಮಿತಿ ಅಧ್ಯಕ್ಷೆ ಶಮಾ ಆಲಿ ಉಜಿರೆ, ಕಾರ್ಯದರ್ಶಿ ನಸೀಮಾ ಬೆಳ್ತಂಗಡಿ, ಕೋಶಾಧಿಕಾರಿ ಹಸೀನಾ ಅಕ್ಬರ್, ಸಮಿತಿ ಸದಸ್ಯರಾದ ಅಡ್ವೋಕೇಟ್ ಅಸ್ಮಾ ಬೆಳ್ತಂಗಡಿ, ಝೈನಬಾ ಉಪಸ್ಥಿತರಿದ್ದರು. ತಾಯಿ ಸಫಿಯಾ ಹಾಜರಿದ್ದು ಮಗಳ ಸಾಧನೆಯ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

Related posts

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya

ತೆಂಕಕಾರಂದೂರು: ಶ್ರೀರಾಗ ಸಂಗೀತ ಶಾಲೆ ಶುಭಾರಂಭ

Suddi Udaya

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya
error: Content is protected !!