ಇಂದಬೆಟ್ಟು ವಲಯದ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳ ವಲಯ ಸಭೆ

Suddi Udaya

ಇಂದಬೆಟ್ಟು : ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕಿನ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿಯ ಸಹಯೋಗದೊಂದಿಗೆ ನಡೆಯುತ್ತಿರುವ ಜನಜಾಗೃತಿಯ ಈ ವರ್ಷದ ಕಾರ್ಯಕ್ರಮದ ಅನುಷ್ಠಾನದ ವಲಯದ ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ನಡೆಯಿತು.

ಈ ಸಭೆಯಲ್ಲಿ ತಾಲೂಕು ಜನಜಾಗೃತಿ ಅಧ್ಯಕ್ಷ ಖಾಸಿಂ ಮಲ್ಲಿಗೆ ಮನೆ, ಬಂಗಾಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಲಕ್ಷ್ಮಣ ಗೌಡ ಇರ್ತಿಲಾಲ್, ನಾವೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಗಣೇಶ್ ಗೌಡ ನಾವೂರು, ತಾಲೂಕು ಯೋಜನಾಧಿಕಾರಿ ಸುರೇಂದ್ರ, ಶಶಿಧರ್ ಮನ್ನಾಡ್ಕ, ಇಂದಬೆಟ್ಟು ಗ್ರಾಮ ಸಮಿತಿ ಅಧ್ಯಕ್ಷರು ವೀರಪ್ಪ ಮೊಯ್ಲಿ , ನಾವೂರು ಎ ಬಿ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಅಮಿತಾ, ಶ್ರೀಮತಿ ಸರೋಜ, ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಸೇವಾ ಪ್ರತಿನಿಧಿಗಳಾದ ಶ್ರೀಮತಿ ಸುನೀತಾ, ಶ್ರೀಮತಿ ಪುಷ್ಪಲತಾ ಉಪಸ್ಥಿತರಿದ್ದರು.

Leave a Comment

error: Content is protected !!