28.2 C
ಪುತ್ತೂರು, ಬೆಳ್ತಂಗಡಿ
September 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮತ್ತು ಹರ್ಷೇಂದ್ರ ಕುಮಾರ್ ಅವರ ನಿರ್ದೇಶನದಂತೆ ಪ್ರತಿ ತಿಂಗಳು ಉಚಿತ ರೋಗ ತಪಾಸಣಾ ಶಿಬಿರದಲ್ಲಿ ನಡೆಯುತ್ತಿದ್ದು, ಮೇ26 ರಂದು ಚರ್ಮರೋಗ ತಪಾಸಣಾ ಶಿಬಿರ ನಡೆಸಲಾಯಿತು.


ಈ ಶಿಬಿರದಲ್ಲಿ ಚರ್ಮದ ಕಲೆಗಳು, ಕಪ್ಪು ಕಲೆಗಳು, ಕೂದಲು ಉದುರುವಿಕೆ ಮತ್ತು ತಲೆಹೊಟ್ಟು, ಮಕ್ಕಳ ಚರ್ಮದ ತೊಂದರೆಗಳು, ಸೌಂದರ್ಯದ ಸಮಸ್ಯೆಗಳು, ಕುಷ್ಠರೋಗ ಸಮಸ್ಯೆ, ಗಾಯದ ಗುರುತುಗಳು, ಮೊಡವೆಗಳಿಗೆ ಚಿಕಿತ್ಸೆ, ಇಸುಬು, ಡ್ರಗ್ ಅಲರ್ಜಿ, ಸೋರಿಯಾಸಿಸ್, ತೊನ್ನುರೋಗ (ಬಿಳಿ ಮಚ್ಚೆ), ತುರಿಕೆ ಖಜ್ಜಿ, ಉಗುರು ಸಂಬಂಧಿತ ರೋಗಗಳ ತಪಾಸಣೆಯನ್ನು ಉಚಿತವಾಗಿ ನಡೆಸಲಾಯಿತು.


ಚರ್ಮರೋಗ ತಜ್ಞರಾದ ಡಾ| ಭವಿಷ್ಯ ಕೆ. ಶೆಟ್ಟಿMBBS., MD, DNB (DVL) ಶಿಬಿರ ಉದ್ಘಾಟಿಸಿ, ರೋಗಿಗಳ ತಪಾಸಣೆ ನಡೆಸಿದರು. ಶಿಬಿರದಲ್ಲಿ ರೋಗ ತಪಾಸಣೆ ಉಚಿತವಾಗಿತ್ತು. ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ನೀಡಲಾಗಿತ್ತು. ಶಿಬಿರದಲ್ಲಿ 200 ಕ್ಕೂ ಅಧಿಕ ಮಂದಿ ಭಾಗವಹಿಸಿ ಶಿಬಿರದ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ಶಿಶಿಲ ಗ್ರಾಮ ಪಂಚಾಯತ್ ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ಸುಲ್ಕೇರಿಮೊಗ್ರು: ಜಗದೀಶ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಮಚ್ಚಿನ ಹಿ. ಪ್ರಾ. ಶಾಲೆಯಲ್ಲಿ ವಿಪತ್ತು ತಂಡದ ಸ್ವಯಂ ಸೇವಕರಿಂದ ಶಾಲಾ ಕೈತೋಟ ನಿರ್ಮಾಣ

Suddi Udaya
error: Content is protected !!