23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮತ್ತು ಹರ್ಷೇಂದ್ರ ಕುಮಾರ್ ಅವರ ನಿರ್ದೇಶನದಂತೆ ಪ್ರತಿ ತಿಂಗಳು ಉಚಿತ ರೋಗ ತಪಾಸಣಾ ಶಿಬಿರದಲ್ಲಿ ನಡೆಯುತ್ತಿದ್ದು, ಮೇ26 ರಂದು ಚರ್ಮರೋಗ ತಪಾಸಣಾ ಶಿಬಿರ ನಡೆಸಲಾಯಿತು.


ಈ ಶಿಬಿರದಲ್ಲಿ ಚರ್ಮದ ಕಲೆಗಳು, ಕಪ್ಪು ಕಲೆಗಳು, ಕೂದಲು ಉದುರುವಿಕೆ ಮತ್ತು ತಲೆಹೊಟ್ಟು, ಮಕ್ಕಳ ಚರ್ಮದ ತೊಂದರೆಗಳು, ಸೌಂದರ್ಯದ ಸಮಸ್ಯೆಗಳು, ಕುಷ್ಠರೋಗ ಸಮಸ್ಯೆ, ಗಾಯದ ಗುರುತುಗಳು, ಮೊಡವೆಗಳಿಗೆ ಚಿಕಿತ್ಸೆ, ಇಸುಬು, ಡ್ರಗ್ ಅಲರ್ಜಿ, ಸೋರಿಯಾಸಿಸ್, ತೊನ್ನುರೋಗ (ಬಿಳಿ ಮಚ್ಚೆ), ತುರಿಕೆ ಖಜ್ಜಿ, ಉಗುರು ಸಂಬಂಧಿತ ರೋಗಗಳ ತಪಾಸಣೆಯನ್ನು ಉಚಿತವಾಗಿ ನಡೆಸಲಾಯಿತು.


ಚರ್ಮರೋಗ ತಜ್ಞರಾದ ಡಾ| ಭವಿಷ್ಯ ಕೆ. ಶೆಟ್ಟಿMBBS., MD, DNB (DVL) ಶಿಬಿರ ಉದ್ಘಾಟಿಸಿ, ರೋಗಿಗಳ ತಪಾಸಣೆ ನಡೆಸಿದರು. ಶಿಬಿರದಲ್ಲಿ ರೋಗ ತಪಾಸಣೆ ಉಚಿತವಾಗಿತ್ತು. ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ನೀಡಲಾಗಿತ್ತು. ಶಿಬಿರದಲ್ಲಿ 200 ಕ್ಕೂ ಅಧಿಕ ಮಂದಿ ಭಾಗವಹಿಸಿ ಶಿಬಿರದ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ಮಿತ್ತಬಾಗಿಲು:‌ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya

ಜೆಸಿಐ ಬೆಳ್ತಂಗಡಿಯ ಮಹಾಸಂಗಮ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಮುಂಡಾಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya
error: Content is protected !!