26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಇವರ ಸಹಕಾರದೊಂದಿಗೆ ಜೂ 01 ರಂದು ಶನಿವಾರ ಪೂರ್ವಾಹ್ನ 10-30 ರಿಂದ ಬಿದಿರು ಕೃಷಿ ಮಾಹಿತಿ ಹಾಗೂ ಬಿದಿರು ತೋಟ ಭೇಟಿ ಕಾರ್ಯಕ್ರಮವನ್ನು ಅಪ್ಪೆಲ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನ, ಅಪ್ಪೆಲ ಬಯಲು ನೆರಿಯಾ ಇಲ್ಲಿ ಏರ್ಪಡಿಸಲಾಗಿದೆ.

ನೊಂದಾಯಿಸಿಕೊಂಡ 50 ಜನ ಕೃಷಿಕರಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಕಾರ್ಯಕ್ರಮದಲ್ಲಿ ಬಿದಿರು ಸೊಸೈಟಿ ಆಫ್ ಇಂಡಿಯಾ ಇಲ್ಲಿನ ತಜ್ಞರು ಬಿದಿರು ಕೃಷಿ ವಿಧಾನ ಮತ್ತು ಬಿದಿರು ಉತ್ಪನ್ನ ಮಾರಾಟ ಅವಕಾಶದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಆಸಕ್ತರು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಕೇಂದ್ರ ಕಛೇರಿಯನ್ನು ಸಂಪರ್ಕಿಸಿ, ಪ್ರವೇಶ ಶುಲ್ಕ ರೂ 100/- ಮಾತ್ರ ನೀಡಿ ಹೆಸರು ನೋಂದಾಯಿಸಲು ಅವಕಾಶವಿರುತ್ತದೆ. ಪ್ರಥಮವಾಗಿ ನೋಂದಾಯಿಸಿಕೊಂಡ 50 ಕೃಷಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಕ್ಕಾಗಿ 08256-200183, 200783

Related posts

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯತ್ ವತಿಯಿಂದ ಮುಂಗಾರು ಪೂರ್ವ ಸಿದ್ಧತಾ ಸಭೆ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ:

Suddi Udaya

ಇಂದಬೆಟ್ಟು ಗ್ರಾ.ಪಂ.ನಲ್ಲಿ ಆರೋಗ್ಯ ಕಾರ್ಯಪಡೆಯ ಸದಸ್ಯರಿಗೆ ತರಬೇತಿ ಕಾರ್ಯಾಗಾರ ಹಾಗೂ ಸ್ವಚ್ಛತಾ ಹಿ ಸೇವಾ ಆಂದೋಲನ

Suddi Udaya
error: Content is protected !!