23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

ಬೆಳ್ತಂಗಡಿ: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಇವರ ಸಹಕಾರದೊಂದಿಗೆ ಜೂ 01 ರಂದು ಶನಿವಾರ ಪೂರ್ವಾಹ್ನ 10-30 ರಿಂದ ಬಿದಿರು ಕೃಷಿ ಮಾಹಿತಿ ಹಾಗೂ ಬಿದಿರು ತೋಟ ಭೇಟಿ ಕಾರ್ಯಕ್ರಮವನ್ನು ಅಪ್ಪೆಲ ಶ್ರೀ ಉಮಾಪಂಚಲಿಂಗೇಶ್ವರ ದೇವಸ್ಥಾನ, ಅಪ್ಪೆಲ ಬಯಲು ನೆರಿಯಾ ಇಲ್ಲಿ ಏರ್ಪಡಿಸಲಾಗಿದೆ.

ನೊಂದಾಯಿಸಿಕೊಂಡ 50 ಜನ ಕೃಷಿಕರಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ.

ಕಾರ್ಯಕ್ರಮದಲ್ಲಿ ಬಿದಿರು ಸೊಸೈಟಿ ಆಫ್ ಇಂಡಿಯಾ ಇಲ್ಲಿನ ತಜ್ಞರು ಬಿದಿರು ಕೃಷಿ ವಿಧಾನ ಮತ್ತು ಬಿದಿರು ಉತ್ಪನ್ನ ಮಾರಾಟ ಅವಕಾಶದ ಬಗ್ಗೆ ಮಾಹಿತಿ ನೀಡಲಿದ್ದಾರೆ.

ಆಸಕ್ತರು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ (ನಿ.) ಕೇಂದ್ರ ಕಛೇರಿಯನ್ನು ಸಂಪರ್ಕಿಸಿ, ಪ್ರವೇಶ ಶುಲ್ಕ ರೂ 100/- ಮಾತ್ರ ನೀಡಿ ಹೆಸರು ನೋಂದಾಯಿಸಲು ಅವಕಾಶವಿರುತ್ತದೆ. ಪ್ರಥಮವಾಗಿ ನೋಂದಾಯಿಸಿಕೊಂಡ 50 ಕೃಷಿಕರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಕ್ಕಾಗಿ 08256-200183, 200783

Related posts

ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya

ಅಂಬರ ಮರ್ಲೆರ್” ರಿಟರ್ನ್ಸ್ ತುಳು ಧಾರಾವಾಹಿಯ ತಂಡಕ್ಕೆ ಶಾಸಕ ಹರೀಶ್ ಪೂಂಜರವರಿಂದ ಶುಭ ಹಾರೈಕೆ

Suddi Udaya

ಧರ್ಮಸ್ಥಳದಲ್ಲಿ ಯಕ್ಷಕಲಾವಿದ ವಸಂತ ಗೌಡ ಕಾಯರ್ತಡ್ಕ ಕಲಾಯಾನ ಸ್ವರ್ಣ ಸಂಭ್ರಮ

Suddi Udaya
error: Content is protected !!