25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕುಕ್ಕೇಡಿ: ವಿದ್ಯೆಯ ಜೊತೆ ಜೊತೆಗೆ ತಮ್ಮಲ್ಲಿರುವ ವಿಶಿಷ್ಟ ಪ್ರತಿಭೆಗಳನ್ನು ಮೈಗೂಡಿಸಿಕೊಂಡು ಸಾಧನೆಯನ್ನು ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕರೆಯನ್ನು ನೀಡುತ್ತಾ ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುವುದು, ವಿಧ್ಯೆಯ ಜೊತೆಗೆ ವಿನಯ, ಸಂಸ್ಕಾರಗಳನ್ನು ವಿದ್ಯಾರ್ಥಿ ದೆಸೆಯಲ್ಲಿ ಅಳವಡಿಸಿಕೊಂಡು ಮುಂದಿನ ಭವ್ಯ ಭಾರತದ ರತ್ನಗಳಾಗಿ ವಿದ್ಯಾರ್ಥಿಗಳು ಮೂಡಿ ಬರಲಿ ಎಂದು ಶುಭ ಹಾರೈಸಿದವರು.

ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳಾದ ರತ್ನಾಕರ್ ರಾವ್ ರವರು ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಮೇ 26ರಂದು ಮಂಜುಶ್ರೀ ಭಜನಾ ಮಂದಿರದಲ್ಲಿ ಹಮ್ಮಿಕೊಂಡ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಜುಶ್ರೀ ಭಜನಾ ಮಂಡಳಿಯ ಅಧ್ಯಕ್ಷ ಕೆ ವೈ ರವಿಕುಮಾರ್ ಮಂಜನಕ್ಕಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ಮಂಜುಶ್ರೀ ಭಜನಾ ಮಂಡಳಿಯ ಕಾರ್ಯದರ್ಶಿ ತನಿಯಪ್ಪ ರಾಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ವ್ಯಾಪ್ತಿಯ ಎಂಟರಿಂದ ದ್ವಿತೀಯ ಪಿಯುಸಿ ವರೆಗಿನ 85 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.

2023-24ನೇ ಸಾಲಿನ SSLC ಯಲ್ಲಿ 90% ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

ಕು.ವೈಷ್ಣವಿ ಎನ್ ಶೇಟ್ ರವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಮಂಡಳಿಯ ಮಾಜಿ ಅಧ್ಯಕ್ಷ ಭರತ್ ರಾಜ್ ಅಮೈ ರವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಮಂಡಳಿಯ ಮಾಜಿ ಅಧ್ಯಕ್ಷ ಜಗನ್ನಾಥ ದೇವಾಡಿಗ ನಿರೂಪಿಸಿದ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷ ಸೋಮನಾಥ ಕೆ ವಿ ವಂದಿಸಿದರು.

Related posts

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya

ಉಜಿರೆ ಹೆದ್ದಾರಿಯಲ್ಲಿ ತೆರೆದ ಚರಂಡಿಗಳು: ಸುದ್ದಿ ಉದಯ ಜನಧ್ವನಿ

Suddi Udaya

ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣoದೂರು ಪಣಕಜೆ ಇದರ ಆಶ್ರಯದಲ್ಲಿ ಪುರುಷರ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬ್ಬಡಿ ಪಂದ್ಯಾಟ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ವಾಣಿ ಕಾಲೇಜಿನ ಪರಂಪರಾ ವೇದಿಕೆಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಪುರಿಯ ಹಾಲಿನ ಸೊಸೈಟಿ ನೂತನ ಕಟ್ಟಡದ ಅನುದಾನಕ್ಕಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
error: Content is protected !!