July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಕ್ಕೇಡಿ: ಕುಂಡದಬೆಟ್ಟು ಮಂಜುಶ್ರೀ ಭಜನಾ ಮಂಡಳಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕುಕ್ಕೇಡಿ: ವಿದ್ಯೆಯ ಜೊತೆ ಜೊತೆಗೆ ತಮ್ಮಲ್ಲಿರುವ ವಿಶಿಷ್ಟ ಪ್ರತಿಭೆಗಳನ್ನು ಮೈಗೂಡಿಸಿಕೊಂಡು ಸಾಧನೆಯನ್ನು ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕರೆಯನ್ನು ನೀಡುತ್ತಾ ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಭಾಗವಹಿಸುವುದು, ವಿಧ್ಯೆಯ ಜೊತೆಗೆ ವಿನಯ, ಸಂಸ್ಕಾರಗಳನ್ನು ವಿದ್ಯಾರ್ಥಿ ದೆಸೆಯಲ್ಲಿ ಅಳವಡಿಸಿಕೊಂಡು ಮುಂದಿನ ಭವ್ಯ ಭಾರತದ ರತ್ನಗಳಾಗಿ ವಿದ್ಯಾರ್ಥಿಗಳು ಮೂಡಿ ಬರಲಿ ಎಂದು ಶುಭ ಹಾರೈಸಿದವರು.

ವೇಣೂರು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳಾದ ರತ್ನಾಕರ್ ರಾವ್ ರವರು ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ಮೇ 26ರಂದು ಮಂಜುಶ್ರೀ ಭಜನಾ ಮಂದಿರದಲ್ಲಿ ಹಮ್ಮಿಕೊಂಡ ಉಚಿತ ಪುಸ್ತಕ ವಿತರಣಾ ಸಮಾರಂಭದಲ್ಲಿ ಮಾತಾಡಿದರು.

ಸಮಾರಂಭದ ಅಧ್ಯಕ್ಷತೆಯನ್ನು ಮಂಜುಶ್ರೀ ಭಜನಾ ಮಂಡಳಿಯ ಅಧ್ಯಕ್ಷ ಕೆ ವೈ ರವಿಕುಮಾರ್ ಮಂಜನಕ್ಕಿ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುಕ್ಕೇಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಿರ್ಮಲ್ ಕುಮಾರ್ ಜೈನ್, ಮಂಜುಶ್ರೀ ಭಜನಾ ಮಂಡಳಿಯ ಕಾರ್ಯದರ್ಶಿ ತನಿಯಪ್ಪ ರಾಣ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕುಕ್ಕೇಡಿ ನಿಟ್ಟಡೆ ಗ್ರಾಮಗಳ ವ್ಯಾಪ್ತಿಯ ಎಂಟರಿಂದ ದ್ವಿತೀಯ ಪಿಯುಸಿ ವರೆಗಿನ 85 ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು.

2023-24ನೇ ಸಾಲಿನ SSLC ಯಲ್ಲಿ 90% ಮೇಲ್ಪಟ್ಟು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮಂಡಳಿಯ ವತಿಯಿಂದ ಅಭಿನಂದಿಸಲಾಯಿತು.

ಕು.ವೈಷ್ಣವಿ ಎನ್ ಶೇಟ್ ರವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಮಂಡಳಿಯ ಮಾಜಿ ಅಧ್ಯಕ್ಷ ಭರತ್ ರಾಜ್ ಅಮೈ ರವರು ಪ್ರಾಸ್ತಾವಿಕದೊಂದಿಗೆ ಸ್ವಾಗತಿಸಿದರು. ಮಂಡಳಿಯ ಮಾಜಿ ಅಧ್ಯಕ್ಷ ಜಗನ್ನಾಥ ದೇವಾಡಿಗ ನಿರೂಪಿಸಿದ ಕಾರ್ಯಕ್ರಮವನ್ನು ಮಾಜಿ ಅಧ್ಯಕ್ಷ ಸೋಮನಾಥ ಕೆ ವಿ ವಂದಿಸಿದರು.

Related posts

ಗೇರುಕಟ್ಟೆ: ಕೃಷಿಕ ಪೆರಾಜೆ ಬಳ್ಳಿದಡ್ಡ ಕಾಂ ತಪ್ಪ ಗೌಡ ನಿಧನ

Suddi Udaya

ಗುರುವಾಯನಕೆರೆ : ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಡುಮದ್ದು ತಯಾರಿಕ ಘಟಕದಲ್ಲಿ ಮಹಾ ಸ್ಪೋಟ ದುರಂತದಲ್ಲಿ ಸಾವು ಹಾಗೂ ಹಲವರಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ನಗರದಲ್ಲಿ ವಿದ್ಯುತ್ ಕಣ್ಣ ಮುಚ್ಚಾಲೆ: ರಾತ್ರೋ ರಾತ್ರಿ ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಿದ ನಾಗರೀಕರು

Suddi Udaya

ಜೆಇಇ ಅಡ್ವಾನ್ಸ್‌ 2026 ಫಲಿತಾಂಶ: ಎಕ್ಸೆಲ್‌ ಗುರುವಾಯನಕೆರೆಗೆ ರಾಷ್ಟ್ರ ಮಟ್ಟದಲ್ಲಿ 42ನೇ ರ‍್ಯಾಂಕ್

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರ ಪರಿವಾರ ದೈವಗಳಿಗೆ ಸಂಕ್ರಮಣ ಪೂಜೆ

Suddi Udaya
error: Content is protected !!