July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ ಜ್ಯೋತಿ ಯುವತಿ ಮಂಡಲದ ಉದ್ಘಾಟನಾ ಸಮಾರಂಭ

ಬಳಂಜ: ರಾಜ್ಯ ಮಟ್ಟದಲ್ಲಿ ವಿವಿಧ ವಿಭಾಗದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ಜ್ಯೋತಿ ಯುವತಿ ಮಂಡಲದ ನೂತನ ಘಟಕದ ಉದ್ಘಾಟನಾ ಕಾರ್ಯಕ್ರಮವು ಶ್ರೀ ಉಮಾಮಹೇಶ್ವರ ಯುವಕ ಮಂಡಲದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಯುವತಿ ಮಂಡಲದ ಸ್ಥಾಪಕಾಧ್ಯಕ್ಷೆ, ತಾ.ಪಂ ಮಾಜಿ ಉಪಾಧ್ಯಕ್ಷೆ ಚಂದನಾ ಪಡಿವಾಳ್ ಬಳಂಜ ಗುತ್ತು ಉದ್ಘಾಟಿಸಿ ನೂರಾರು ನೆನಪುಗಳಿರುವ ಜ್ಯೋತಿ ಯುವತಿ ಮಂಡಲ ಎರಡು,ಮೂರು ದಶಕಗಳ ಹಿಂದೆ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ ಸಂಸ್ಥೆ. ಕಲೆ, ಸಾಹಿತ್ಯ,ಸಾಂಸ್ಕೃತಿಕ, ಕ್ರೀಡೆ ಹೀಗೆ ಹಲವು ವಿಭಾಗದಲ್ಲಿ ಹೆಸರು ಗಳಿಸಿದೆ. ಇದೀಗ ಮತ್ತೆ ನೂತನ ತಂಡದೊಂದಿಗೆ ಮೇ 26 ರಂದು ಉದ್ಘಾಟನೆಗೊಂಡಿರುವುದು ಸಂತಸ ತಂದಿದೆ ಎಂದರು.

ವೇದಿಕೆಯಲ್ಲಿ ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ಮನೋಹರ್ ಬಳಂಜ, ಅಮೃತ ಮಹೋತ್ಸವ ಸಮಿತಿ ಅದ್ಯಕ್ಷ ಚಂದ್ರಶೇಖರ್ ಪಿ.ಕೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಶ್ರೀ ಉಮಾಮಹೇಶ್ವರ ಯುವಕ ಮಂಡಲ ಅಧ್ಯಕ್ಷ ಸುಕೇಶ್ ಪೂಜಾರಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ‌ ಉಪಸ್ಥಿತರಿದ್ದರು.

ಜ್ಯೋತಿ ಯುವತಿ ಮಂಡಲದ ಅಧ್ಯಕ್ಷೆ ಚೇತನಾ ಅವರು ಸ್ವಾಗತಿಸಿದರು, ಚಂದ್ರಹಾಸ್ ಬಳಂಜ ಕಾರ್ಯಕ್ರಮ‌ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ಹೂ ಗುಚ್ಚ ತಯಾರಿಕೆಯ ಸ್ಪರ್ಧೆ ನಡೆಸಲಾಯಿತು. ಪುಷ್ಪಾ ಗಿರೀಶ್ ಪ್ರಾರ್ಥಿಸಿದರು.

Related posts

ಬುದ್ಧಿಮಾಂದ್ಯ ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಕೊಕ್ಕಡ: ಹೊಸೊಕ್ಲುವಿನಲ್ಲಿ ಬೃಹತ್ ಗಾತ್ರದ ಶಂಖಪಾಲ ಹಾವು ಪತ್ತೆ

Suddi Udaya

ಕಾಂಗ್ರೆಸ್ ಸರಕಾರದ ಜನವಿರೋಧಿ ನೀತಿ ವಿರೋಧಿಸಿ ಕಡಿರುದ್ಯಾವರ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ನಿಡಿಗಲ್: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ – ಶಾಂಭವಿ ವಿಲಾಸ ಯಕ್ಷಗಾನ ಪ್ರದರ್ಶನ

Suddi Udaya

“ಬಂಟರ ಕ್ರೀಡಾಕೂಟ-2026” ಕ್ರಿಕೆಟ್ ಹಾಗೂ ತ್ರೋಬಾಲ್ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya
error: Content is protected !!