23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ : ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

ಬೆಳ್ತಂಗಡಿ : ನ್ಯಾಯತರ್ಪು ಗ್ರಾಮದ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ತೇರಾ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ ಕಾರ್ಯಕ್ರಮ ಮೇ.27 ರಂದು ಜರುಗಿತು.


ಸುಮಾರು ಅಂದಾಜು 900 ವರ್ಷಗಳಿಗೂ ಹೆಚ್ಚಿನ ಇತಿಹಾಸ ಪ್ರಸಿದ್ಧ ದೇವಸ್ಥಾನವು ನ್ಯಾಯತರ್ಪು, ಕಳಿಯ ಹಾಗೂ ಓಡಿಲ್ನಾಳ ಗ್ರಾಮದ ಭಕ್ತಾದಿಗಳು ಆರಾಧನೆ ಮೂಲಕ ವಿವಿಧ ಕಾರ್ಯಕ್ರಮಗಳು ನಡೆಯುತ್ತ ಬರುತ್ತಿದೆ.
ಭತ್ತದ ಬೇಸಾಯ ಮರೆಮಾಚುತ್ತಿದ್ದು ಭಾದ್ರಪದ ಮಾಸದಲ್ಲಿ ದೇವಸ್ಥಾನಗಳಲ್ಲಿ ತೆನೆ ಕಟ್ಟುವುದು ಹಾಗೂ ಹೊಸ ಅಕ್ಕಿ ಊಟ ಆಚರಣೆ ನಡೆಯುತ್ತದೆ. ಈ ಸಂದರ್ಭದಲ್ಲಿ ತೆನೆ ಅಗತ್ಯವಾಗಿದೆ. ಮುಂದಿನ ದಿನಗಳಲ್ಲಿ ಭತ್ತದ ಬೇಸಾಯ ಕೃಷಿ ಬೆಳೆಸುವುದು ಅನಿವಾರ್ಯ ವಾಗಿದೆ ಎಂದು ಹಿರಿಯರು ಬೇಸರ ವ್ಯಕ್ತ ಪಡಿಸುತ್ತಿದ್ದಾರೆ.
ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹಾಗೂ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯರಾದ ವಸಂತ ಮಜಲು ನೇಜಿ ನಾಟಿಗೆ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ನಾಳ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಭುವನೇಶ್ ಜಿ, ಸದಸ್ಯರಾದ ಶ್ರೀಮತಿ ವಿಜಯ ಹೆಚ್ ಪ್ರಸಾದ್, ದಿನೇಶ್ ಗೌಡ ಕೆ, ರಾಜೇಶ್ ಶೆಟ್ಟ,ನಾಳ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಎಮ್,ಪ್ರಧಾನ ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ನಾಳ ದೇವಸ್ಥಾನದ ಪ್ರಬಂಧಕರಾದ ಗಿರೀಶ್ ಶೆಟ್ಟಿ , ನಾಳ ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ , ಮಾತೃ ಮಂಡಳಿ ಅಧ್ಯಕ್ಷೆ ರೀತಾ ಚಂದ್ರಶೇಖರ್, ಪೂವಪ್ಪ ಶೆಟ್ಟಿ, ಗೋಪ್ಪಣ್ಣ ಗೌಡ, ಆಶಾ ಕಾರ್ಯಕರ್ತೆ ಶಶಿಕಲಾ, ವಸಂತ ಗೌಡ ಕೆ,ಶೇಖರ ಗೌಡ ಕೆ, ಜಗನಾಥ ಪೂಜಾರಿ, ವಿಮಲ ಕೆ,ರೂಪಾ ಕೆ, ಮಂಜಪ್ಪ ದೇವಾಡಿಗ, ಮೋಹಿನಿ, ವಿನೋಧ ಹಾಗೂ ಭಕ್ತಾದಿಗಳು ಭಾಗವಹಿಸಿದರು.

“ಕುಲ್ಲುಂಜ ಕೃಷಿಕ ಉಮಾನಾಥ ಶೆಟ್ಟಿ ಭತ್ತದಬೀಜ ಬಿತ್ತನೆ ಮಾಡಿ ನೇಜಿ ತಯಾರಿಸಿ ದೇವಸ್ಥಾನಕ್ಕೆ ಉಚಿತವಾಗಿ ನೀಡಿದರು.

Related posts

ಮೇಲಂತಬೆಟ್ಟು : ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ : ಶಕ್ತಿ ನಗರದಲ್ಲಿ ರಸ್ತೆ ಮಧ್ಯೆ ಅಪಾಯಕಾರಿ ಹೊಂಡ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ವೇಣೂರು ಸರಕಾರಿ ಶಾಲೆ ಸ್ಥಳಾಂತರದ ಬಗ್ಗೆ ಹಳೆ ವಿದ್ಯಾರ್ಥಿಗಳ ವಿಚಾರ ವಿನಿಮಯ ಸಭೆ: ಕುಂದುಕೊರತೆ ನೀಗಿಸಲು ಹಳೆವಿದ್ಯಾರ್ಥಿಗಳಿಂದ ಸಹಾಯ ಯಾಚಿಸಲು ನಿರ್ಧಾರ

Suddi Udaya
error: Content is protected !!