23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪೂಜ್ಯ ಹೆಗ್ಗಡೆಯವರ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಮತ್ತು ಹರ್ಷೇಂದ್ರ ಕುಮಾರ್ ಅವರ ನಿರ್ದೇಶನದಂತೆ ಪ್ರತಿ ತಿಂಗಳು ಉಚಿತ ರೋಗ ತಪಾಸಣಾ ಶಿಬಿರದಲ್ಲಿ ನಡೆಯುತ್ತಿದ್ದು, ಮೇ26 ರಂದು ಚರ್ಮರೋಗ ತಪಾಸಣಾ ಶಿಬಿರ ನಡೆಸಲಾಯಿತು.


ಈ ಶಿಬಿರದಲ್ಲಿ ಚರ್ಮದ ಕಲೆಗಳು, ಕಪ್ಪು ಕಲೆಗಳು, ಕೂದಲು ಉದುರುವಿಕೆ ಮತ್ತು ತಲೆಹೊಟ್ಟು, ಮಕ್ಕಳ ಚರ್ಮದ ತೊಂದರೆಗಳು, ಸೌಂದರ್ಯದ ಸಮಸ್ಯೆಗಳು, ಕುಷ್ಠರೋಗ ಸಮಸ್ಯೆ, ಗಾಯದ ಗುರುತುಗಳು, ಮೊಡವೆಗಳಿಗೆ ಚಿಕಿತ್ಸೆ, ಇಸುಬು, ಡ್ರಗ್ ಅಲರ್ಜಿ, ಸೋರಿಯಾಸಿಸ್, ತೊನ್ನುರೋಗ (ಬಿಳಿ ಮಚ್ಚೆ), ತುರಿಕೆ ಖಜ್ಜಿ, ಉಗುರು ಸಂಬಂಧಿತ ರೋಗಗಳ ತಪಾಸಣೆಯನ್ನು ಉಚಿತವಾಗಿ ನಡೆಸಲಾಯಿತು.


ಚರ್ಮರೋಗ ತಜ್ಞರಾದ ಡಾ| ಭವಿಷ್ಯ ಕೆ. ಶೆಟ್ಟಿMBBS., MD, DNB (DVL) ಶಿಬಿರ ಉದ್ಘಾಟಿಸಿ, ರೋಗಿಗಳ ತಪಾಸಣೆ ನಡೆಸಿದರು. ಶಿಬಿರದಲ್ಲಿ ರೋಗ ತಪಾಸಣೆ ಉಚಿತವಾಗಿತ್ತು. ಔಷಧದಲ್ಲಿ 10%, ಲ್ಯಾಬ್ ಟೆಸ್ಟ್ ಮತ್ತು ರೇಡಿಯಾಲಜಿಯಲ್ಲಿ 20% ರಿಯಾಯಿತಿ ನೀಡಲಾಗಿತ್ತು. ಶಿಬಿರದಲ್ಲಿ 200 ಕ್ಕೂ ಅಧಿಕ ಮಂದಿ ಭಾಗವಹಿಸಿ ಶಿಬಿರದ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ಪದ್ಮುಂಜ ಹಾಲು ಉತ್ಪಾದಕರ ಸ. ಸಂಘದಿಂದ ರಾಸುಗಳ ಭ್ರೂಣ ವರ್ಗಾವಣೆ ಕಾರ್ಯಕ್ರಮ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ನೂತನ ಅನ್ನಛತ್ರ ಉದ್ಘಾಟನೆ

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!