24.4 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ವಕೀಲರ ಭವನದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಪ್ರಧಾನ ಹಿರಿಯ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಸಂತ ಮರಕಡ ವಹಿಸಿದರು.

ಮುಖ್ಯ ಅಥಿತಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ ಎಂ ಎಫ್ ಸಿ ಬೆಳ್ತಂಗಡಿ ಸಂದೇಶ್ ಕೆ ಜೆ , ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಉಪಸ್ಥಿತರಿದ್ದರು.

ಶಶಿಧರ ಎಂ ಗೌಡ ರವರು ಸವದತ್ತಿ ನ್ಯಾಯಾಲಯದಿಂದ ವರ್ಗಾವಣೆಗೊಂಡು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದರು. ಇವರು ಕೃಷಿ ಕುಟುಂಬದಿಂದ ಬಂದವರಾಗಿದ್ದು, ಎಂ ಎ ( ಇಂಗ್ಲಿಷ್ ), ಬಿಎ, ಎಲ್ ಎಲ್ ಬಿ ಪದವಿಯನ್ನು ದಾವಣಗೆರೆಯಲ್ಲಿ ಪೂರೈಸಿರುತ್ತಾರೆ. ಪತ್ನಿ ಶ್ರೀಮತಿ ಸುನಿತಾ ಆರ್ ಬೈಲಹೊಂಗಲ ನ್ಯಾಯಾಲಯದಲ್ಲಿ ಎಪಿಪಿ ಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಎ ಜಿ ಪಿ, ಮನೋಹರ್ ಕುಮಾರ್ ಎಂ ಮತ್ತು ಎ ಪಿ ಪಿ ಯವರಾದ ದಿವ್ಯಾರಾಜ್ ಹೆಗ್ಡೆ ಮತ್ತು ಶ್ರೀಮತಿ ಆಶೀತಾ ರವರು ಮತ್ತು ವಕೀಲರ ಸಂಘದ ಪದಾಧಿಕಾರಿಗಳು, ವಕೀಲರುಗಳು, ನ್ಯಾಯಾಲಯದ ಸಿಬ್ಬಂದಿ ವರ್ಗ ಹಾಜರಿದ್ದರು.

ನವೀನ್ ಬಿ ಕೆ ಸ್ವಾಗತಿಸಿ, ಸಂದೀಪ್ ಡಿಸೋಜ ಧನ್ಯವಾದವಿತ್ತರು.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ನಾವೂರು ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಷನ್ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಅವಕಾಶಗಳ ಆಗರ, ಸಾಧನೆಗಳ ಸಾಗರ, ಕರಾವಳಿ ಪ್ರವಾಸೋದ್ಯಮ: ಸಂಪತ್ ಬಿ. ಸುವರ್ಣ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya
error: Content is protected !!