July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನ್ಯಾಯಾಲಯದಲ್ಲಿ ಹಿರಿಯ ಶ್ರೇಣಿ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ

ಬೆಳ್ತಂಗಡಿ ವಕೀಲರ ಸಂಘದ ವತಿಯಿಂದ ವಕೀಲರ ಭವನದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದ ಪ್ರಧಾನ ಹಿರಿಯ ನ್ಯಾಯಾಧೀಶ ಶಶಿಧರ ಎಂ ಗೌಡ ರವರಿಗೆ ಸ್ವಾಗತ ಸಮಾರಂಭ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಸಂತ ಮರಕಡ ವಹಿಸಿದರು.

ಮುಖ್ಯ ಅಥಿತಿಗಳಾಗಿ ಪ್ರಧಾನ ಸಿವಿಲ್ ನ್ಯಾಯಾಧೀಶರು ಮತ್ತು ಜೆ ಎಂ ಎಫ್ ಸಿ ಬೆಳ್ತಂಗಡಿ ಸಂದೇಶ್ ಕೆ ಜೆ , ಹಿರಿಯ ವಕೀಲರ ಸಮಿತಿ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೊ, ಬೆಳ್ತಂಗಡಿ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಉಪಸ್ಥಿತರಿದ್ದರು.

ಶಶಿಧರ ಎಂ ಗೌಡ ರವರು ಸವದತ್ತಿ ನ್ಯಾಯಾಲಯದಿಂದ ವರ್ಗಾವಣೆಗೊಂಡು ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದರು. ಇವರು ಕೃಷಿ ಕುಟುಂಬದಿಂದ ಬಂದವರಾಗಿದ್ದು, ಎಂ ಎ ( ಇಂಗ್ಲಿಷ್ ), ಬಿಎ, ಎಲ್ ಎಲ್ ಬಿ ಪದವಿಯನ್ನು ದಾವಣಗೆರೆಯಲ್ಲಿ ಪೂರೈಸಿರುತ್ತಾರೆ. ಪತ್ನಿ ಶ್ರೀಮತಿ ಸುನಿತಾ ಆರ್ ಬೈಲಹೊಂಗಲ ನ್ಯಾಯಾಲಯದಲ್ಲಿ ಎಪಿಪಿ ಯಾಗಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.

ಕಾರ್ಯಕ್ರಮದಲ್ಲಿ ಎ ಜಿ ಪಿ, ಮನೋಹರ್ ಕುಮಾರ್ ಎಂ ಮತ್ತು ಎ ಪಿ ಪಿ ಯವರಾದ ದಿವ್ಯಾರಾಜ್ ಹೆಗ್ಡೆ ಮತ್ತು ಶ್ರೀಮತಿ ಆಶೀತಾ ರವರು ಮತ್ತು ವಕೀಲರ ಸಂಘದ ಪದಾಧಿಕಾರಿಗಳು, ವಕೀಲರುಗಳು, ನ್ಯಾಯಾಲಯದ ಸಿಬ್ಬಂದಿ ವರ್ಗ ಹಾಜರಿದ್ದರು.

ನವೀನ್ ಬಿ ಕೆ ಸ್ವಾಗತಿಸಿ, ಸಂದೀಪ್ ಡಿಸೋಜ ಧನ್ಯವಾದವಿತ್ತರು.

Related posts

ಪಿಯುಸಿ ಫಲಿತಾಂಶ: ಎಸ್‌ಡಿಎಂ ಪ.ಪೂ. ‘ರೋವರ್ಸ್ ಮತ್ತು ರೇಂಜರ್ಸ್’ ಘಟಕದ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಸ್ವಾತಂತ್ರೋತ್ಸವ ಆಚರಣೆ

Suddi Udaya

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ಉಜಿರೆ ಗ್ರಾಮ ಪಂಚಾಯತ್ ವತಿಯಿಂದ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya
error: Content is protected !!