38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

ಉಜಿರೆ : ಮೇ 28ರಂದು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಎಸ್.ಡಿ.ಎಮ್ ಶಾಲಾ ಬೋಧಕ ವೃಂದಕ್ಕೆ ‘ಅನುಭವದ ಕಲಿಕೆ’ ಕಾರ್ಯಗಾರ ನಡೆಯಿತು.

ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಲರಾದ ಡಾ.ಎ ಜಯಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಎಸ್.ಡಿ.ಎಮ್ ತತ್ವಗಳು, ಶಿಕ್ಷಕ ವೃತ್ತಿಯ ಪಾವಿತ್ರ್ಯತೆಯ ಕುರಿತು ತಮ್ಮ ಮಾತುಗಳನ್ನು ಶಿಕ್ಷಕ ವೃಂದದೊಂದಿಗೆ ಹಂಚಿಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ನೋಲ್ಡನ್ಬ್ರಿಡ್ಜ್ ಫೌಂಡೇಶನ್ ಸಹ ಸಂಸ್ಥಾಪಕ ಮತ್ತು ನಿರ್ದೇಶಕ ಸೋಜೊ ವರ್ಗಿಸ್ ಇವರು ತರಗತಿಯಲ್ಲಿ ಅನುಭವ ಕಲಿಕೆಯ ಕುರಿತು ಪ್ರಾಯೋಗಿಕ ಕಲಿಕೆಯೊಂದಿಗೆ ಶಿಕ್ಷಕರಿಗೆ ಮಾಹಿತಿ ನೀಡಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಇವರು ಶಿಕ್ಷಕರಿಗೆ ಶುಭನುಡಿಗಳೊಂದಿಗೆ ‘ಶಿಕ್ಷಕರು ನಿರಂತರ ವಿದ್ಯಾರ್ಥಿಗಳಾಗಿರಬೇಕು’ ಎಂದು ಕಿವಿಮಾತು ಹೇಳಿದರು.

ಕಾರ್ಯಗಾರದಲ್ಲಿ ಶಿಕ್ಷಕಿಯರಾದ ಕಲ್ಯಾಣಿ ನಿರೂಪಿಸಿ, ಸುಜನ ವಂದಿಸಿ, ಭವ್ಯ ಹಾಗೂ ಚೇತನಾ ಅತಿಥಿ ಪರಿಚಯ, ರವೀನ ವಂದಿಸಿದರು.

Related posts

ಉಜಿರೆ ಪಂಚಗವ್ಯ ಚಿಕಿತ್ಸಾ ಶಿಬಿರ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರು ರೋಗಿಗಳ ಸೇವೆಗೆ ಲಭಿಸುತ್ತಿಲ್ಲ : ಪಟ್ಟಣ ಪಂಚಾಯತ್ ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ

Suddi Udaya

ಧರ್ಮಸ್ಥಳದಲ್ಲಿ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!