25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

ಉಜಿರೆ : ಮೇ 28ರಂದು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಎಸ್.ಡಿ.ಎಮ್ ಶಾಲಾ ಬೋಧಕ ವೃಂದಕ್ಕೆ ‘ಅನುಭವದ ಕಲಿಕೆ’ ಕಾರ್ಯಗಾರ ನಡೆಯಿತು.

ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಲರಾದ ಡಾ.ಎ ಜಯಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಎಸ್.ಡಿ.ಎಮ್ ತತ್ವಗಳು, ಶಿಕ್ಷಕ ವೃತ್ತಿಯ ಪಾವಿತ್ರ್ಯತೆಯ ಕುರಿತು ತಮ್ಮ ಮಾತುಗಳನ್ನು ಶಿಕ್ಷಕ ವೃಂದದೊಂದಿಗೆ ಹಂಚಿಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ನೋಲ್ಡನ್ಬ್ರಿಡ್ಜ್ ಫೌಂಡೇಶನ್ ಸಹ ಸಂಸ್ಥಾಪಕ ಮತ್ತು ನಿರ್ದೇಶಕ ಸೋಜೊ ವರ್ಗಿಸ್ ಇವರು ತರಗತಿಯಲ್ಲಿ ಅನುಭವ ಕಲಿಕೆಯ ಕುರಿತು ಪ್ರಾಯೋಗಿಕ ಕಲಿಕೆಯೊಂದಿಗೆ ಶಿಕ್ಷಕರಿಗೆ ಮಾಹಿತಿ ನೀಡಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಇವರು ಶಿಕ್ಷಕರಿಗೆ ಶುಭನುಡಿಗಳೊಂದಿಗೆ ‘ಶಿಕ್ಷಕರು ನಿರಂತರ ವಿದ್ಯಾರ್ಥಿಗಳಾಗಿರಬೇಕು’ ಎಂದು ಕಿವಿಮಾತು ಹೇಳಿದರು.

ಕಾರ್ಯಗಾರದಲ್ಲಿ ಶಿಕ್ಷಕಿಯರಾದ ಕಲ್ಯಾಣಿ ನಿರೂಪಿಸಿ, ಸುಜನ ವಂದಿಸಿ, ಭವ್ಯ ಹಾಗೂ ಚೇತನಾ ಅತಿಥಿ ಪರಿಚಯ, ರವೀನ ವಂದಿಸಿದರು.

Related posts

ಪೌರಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಮೀಸಲು: ಹದಿನೈದು ದಿನಗಳ ಗಡುವು

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಮೋಹನ್ ಗೌಡ, ಉಪಾಧ್ಯಕ್ಷರಾಗಿ ಶ್ರೀಮತಿ ಲತಾ ಶೆಟ್ಟಿ ಆಯ್ಕೆ

Suddi Udaya

ಶ್ರೀ ರಾಮ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಅನನ್ಯ ಫೀಡ್ಸ್ ಹುಬ್ಬಳ್ಳಿ ಹಾಗೂ ಫಾರ್ಮ್ ಫುಡ್ ಪಾಂಡವರಕಲ್ಲು ಇವರಿಂದ ಗುಂಡೂರಿ ಕಾವೇರಮ್ಮ ಅಮೃತಧಾರಾ ಗೋಶಾಲೆಗೆ ನವಧ್ಯಾನ ಹಿಂಡಿ, ನಿಸರ್ಗ ಮೇವು ಸಮರ್ಪಣೆ

Suddi Udaya

ರೂ. 35 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿರುವ ಪಟ್ಟಣ ಪಂಚಾಯತ್ ಕಛೇರಿ ವಿಸ್ತ್ರತ ಕಟ್ಟಡದ ಸಭಾಂಗಣ ಶಾಸಕ ಹರೀಶ್ ಪೂಂಜರಿಂದ ಉದ್ಘಾಟನೆ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಪಡಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya
error: Content is protected !!