September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಮೇ 27 ರಂದು ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ.


ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ ಫಣಿಕಲ್ಲು ಕಡೆ ಮುಂದುವರೆದಿದೆ. ಅಲ್ಲಿ ರಾಘವೇಂದ್ರ ಪಟವರ್ಧನ್ ರವರ ತೋಟಕ್ಕೆ ಕಾಡಾನೆ ಬರುತ್ತಿದ್ದಂತೆ ಮನೆಯವರಿಗೆ ತಿಳಿದು ಬಂದ ಕಾರಣ ಸ್ಥಳೀಯರು ಸೇರಿ ಆನೆಯನ್ನು ಓಡಿಸಿ, ಬೆಳಗಿನವರೆಗೆ ಗಸ್ತು ತಿರುಗಿದ ಕಾರಣ ಯಾವುದೇ ಕೃಷಿಹಾನಿ ಸಂಭವಿಸಿಲ್ಲ. ಸಲಗ ಇಲ್ಲಿಗೆ ಸಮೀಪದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.


ಮೇ 26 ರಂದು ರಾತ್ರಿ ಕಾಡಾನೆ ಇದೇ ಗ್ರಾಮದ ಬಸವದಡ್ಡು ಪರಿಸರದ ತೋಟಗಳಲ್ಲಿ ಕೃಷಿಹಾನಿ ಉಂಟು ಮಾಡಿತ್ತು. ಬಸವದಡ್ಡು, ಮಿತ್ತಕಟ್ಟಾಜೆ, ಫಣಿಕಲ್ಲು, ಮುಂಡಾಜೆ, ದುಂಬೆಟ್ಟು ಪರಿಸರ ಹತ್ತಿರ ಹತ್ತಿರವಿದ್ದು ಕಾಡಾನೆ ಉಪಟಳ ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಷ್ಠಬಂಧ ಬ್ರಹ್ಮಕಲಶೋತ್ಸವ ಧಾರ್ಮಿಕ ಸಭೆ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ಬೆಳ್ತಂಗಡಿ: ಸುರೇಶ್ ಪೂಜಾರಿ ಜೈಮಾತ ನಾಲ್ಕೂರು ಬಿಜೆಪಿ ಸೇರ್ಪಡೆ

Suddi Udaya

ಬೆಳ್ತಂಗಡಿ: ಅಪಘಾತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಸಿ.ಬಿ.ಎಸ್.ಇ ಫಲಿತಾಂಶ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!