25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ : ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಸಿ. ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಶ್ರೀನಿಲಯದಲ್ಲಿ ಪುತ್ತೂರು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಮತ್ತು
ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು. ಶ್ರೀಮತಿ ಸ್ವರ್ಣಲತಾ ಭಾಸ್ಕರ್ ಉಪಸ್ಥಿತರಿದ್ದರು.

88 ವರ್ಷದ ಹಿರಿಯ ವಿದ್ವಾಂಸರಾದ ಶಾಸ್ತ್ರಿಯವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ, ದಶಾವತಾರ ಉಪನ್ಯಾಸಗಳು, ಅರ್ಥ ಸಹಿತ ಕುಮಾರ ವಿಜಯ ಮುಂತಾದ ಅಪೂರ್ವ ಕೃತಿಗಳನ್ನು ರಚಿಸಿದ್ದು ಯಕ್ಷಗಾನ ಆಸಕ್ತರಿಗೆ ಉಪಯುಕ್ತವಾದ ಕೃತಿಗಳಾಗಿವೆ.

ಶೇಣಿ ,ಸಾಮಗ, ಪೆರ್ಲ, ಕಾಂತ ರೈ , ಜೋಷಿ ಮೊದಲಾದ ಮಹಾನ್ ಕಲಾವಿದರೊಂದಿಗೆ ಅರ್ಥಧಾರಿಯಾಗಿ ಜನಪ್ರಿಯ ರಾಗಿದ್ದ ಇವರು ಕಳೆದ ಮೂರು ವರ್ಷಗಳಿಂದ ತಾಳಮದ್ದಳೆಯಲ್ಲಿ ಭಾಗವಹಿಸದೆ ಇದ್ದರೂ ವಿಶ್ರಾಂತ ಜೀವನದಲ್ಲಿ ತನ್ನ ಜ್ಞಾನ,ಅನುಭವಗಳನ್ನು ಕಲಾಸಕ್ತರ ಜೊತೆ ಹಂಚಿಕೊಳ್ಳುತ್ತ ಸಕ್ರಿಯವಾಗಿದ್ದಾರೆ.

Related posts

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಮಳೆಲ್ ಓರ್ ನಾಲ್ ಕ್ರೀಡಾಕೂಟ

Suddi Udaya

ವೇಣೂರು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿನಿ ಧನುಶ್ರೀ ಎಸ್ ಕುಲಾಲ್ ರಾಜ್ಯಮಟ್ಟದ ಭಾಷಣ ಸ್ಪರ್ಧೆಗೆ ಆಯ್ಕೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆ: ಮಾ.30 ರಂದು ಬಿಜೆಪಿ ಬೆಳ್ತಂಗಡಿ ಮಂಡಲ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಮುಂಡತ್ತೊಡಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಗೇರುಕಟ್ಟೆ: ಇರೋಲು ವ್ಯಾಪಾರಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!