30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ : ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಸಿ. ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಶ್ರೀನಿಲಯದಲ್ಲಿ ಪುತ್ತೂರು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಮತ್ತು
ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು. ಶ್ರೀಮತಿ ಸ್ವರ್ಣಲತಾ ಭಾಸ್ಕರ್ ಉಪಸ್ಥಿತರಿದ್ದರು.

88 ವರ್ಷದ ಹಿರಿಯ ವಿದ್ವಾಂಸರಾದ ಶಾಸ್ತ್ರಿಯವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ, ದಶಾವತಾರ ಉಪನ್ಯಾಸಗಳು, ಅರ್ಥ ಸಹಿತ ಕುಮಾರ ವಿಜಯ ಮುಂತಾದ ಅಪೂರ್ವ ಕೃತಿಗಳನ್ನು ರಚಿಸಿದ್ದು ಯಕ್ಷಗಾನ ಆಸಕ್ತರಿಗೆ ಉಪಯುಕ್ತವಾದ ಕೃತಿಗಳಾಗಿವೆ.

ಶೇಣಿ ,ಸಾಮಗ, ಪೆರ್ಲ, ಕಾಂತ ರೈ , ಜೋಷಿ ಮೊದಲಾದ ಮಹಾನ್ ಕಲಾವಿದರೊಂದಿಗೆ ಅರ್ಥಧಾರಿಯಾಗಿ ಜನಪ್ರಿಯ ರಾಗಿದ್ದ ಇವರು ಕಳೆದ ಮೂರು ವರ್ಷಗಳಿಂದ ತಾಳಮದ್ದಳೆಯಲ್ಲಿ ಭಾಗವಹಿಸದೆ ಇದ್ದರೂ ವಿಶ್ರಾಂತ ಜೀವನದಲ್ಲಿ ತನ್ನ ಜ್ಞಾನ,ಅನುಭವಗಳನ್ನು ಕಲಾಸಕ್ತರ ಜೊತೆ ಹಂಚಿಕೊಳ್ಳುತ್ತ ಸಕ್ರಿಯವಾಗಿದ್ದಾರೆ.

Related posts

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉರುವಾಲು: ಕಾರಿಂಜ ಬಾಯ್ತಾರು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯ ಸಮವಸ್ತ್ರ ವಿತರಣೆ

Suddi Udaya

ನಾಳೆ (ಜು.14) ಉಜಿರೆಯಲ್ಲಿ ಶುಭಾರಂಭಗೊಳ್ಳಲಿದೆ “ಡೈನಮಿಕ್ ಡ್ಯಾನ್ಸ್ ಫ್ಯಾಕ್ಟರಿ&ಕಾಸ್ಟೋಮ್ ಕಾರ್ನರ್”

Suddi Udaya
error: Content is protected !!