ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಬೆಳ್ತಂಗಡಿ; ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಪ್ರತಿಭಟಿಸಿದ್ದ ಶಾಸಕ ಹರೀಶ್ ರ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28. ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್ ) ಸಲ್ಲಿಸಿದ್ದಾರೆ.
ಪ್ರಕರಣದ ತನಿಖೆಗಾಗಿ ಎಸ್.ಪಿ ಅವರಿಂದ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಜಿ.ಜೆ‌ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಈ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಬಿಜೆಪಿ ಯುವ ಮೋರ್ಚಾದ ನಾಯಕರುಗಳಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಉಜಿರೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಈ ಪೈಕಿ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ನಡೆದ ಪ್ರತಿಭಟನೆಯ ವೇಳೆ ಶಾಸಕ ಹರೀಶ್ ಪೂಂಜ ಅವರು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದೂ ಮಾತ್ರವಲ್ಲದೆ ಪೊಲೀಸರ ವಿರುದ್ಧ ಅಸಂವಿಧಾನಿಕ ಪದ ಬಳಸಿ‌ ನಿಂದಿಸಿದ್ದರು ಎಂದು ಒಂದು ಪ್ರಕರಣ ದಾಖಲಾಗಿತ್ತು.
ಈ ವಿಚಾರವನ್ನು ಖಂಡಿಸಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಆಡಳಿತ ಸೌಧದ ಬಳಿ ನಡೆದಿದ್ದ ಪ್ರತಿಭಟನೆಯ ವೇಳೆ ಮತ್ತೆ ಶಾಸಕರು ಪೊಲೀಸರ ವಿರುದ್ಧವೇ ಹರಿಹಾಯ್ದ ಬಗ್ಗೆ ಎರಡನೇ ಎಫ್ ಐ ಆರ್ ದಾಖಲಾಗಿತ್ತು.


ಈ ಸಂಬಂಧವಾಗಿ ಶಾಸಕರಿಗೆ ನೋಟೀಸು ನೀಡಿ ಠಾಣೆಗೆ ವಿಚಾರಣೆಗೆ ಕರತರಲು ಪೊಲೀಸರು ಮನೆಗೆ ತೆರಳಿದ್ದ ವೇಳೆ ಅಲ್ಲೂ ಸಾವಿರಾರು ಜನ ಜಮಾಯಿಸಿ ಹೈ ಡ್ರಾಮಾ ನಡೆದಿತ್ತು.
ಈ ಎರಡೂ ಪ್ರಕರಣಗಳ ತ್ವರಿತ ತನಿಖೆಗೆ ಎಸ್.ಪಿ‌ ಅವರು ನಿಯೋಜಿಸಿದ ತಂಡ ಇದೀಗ ತನಿಖೆ ಪೂರ್ತಿಗೊಳಿಸಿದ್ದು, ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Related posts

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಮೊಗ್ರು: ಕರಂಬಾರುವಿನಲ್ಲಿ ಕಾಡಾನೆ ಪ್ರತ್ಯಕ್ಷ: ನೇತ್ರಾವತಿ ನದಿಯಲ್ಲಿ ಜಳಕ

Suddi Udaya

ಶಿರ್ಲಾಲು ವಿಶ್ವ ಹಿಂದೂ ಪರಿಷತ್‌ ವತಿಯಿಂದ ಆರ್ಥಿಕ ನೆರವು

Suddi Udaya

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ: ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!