July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

ಉಜಿರೆ : ಮೇ 28ರಂದು ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಎಸ್.ಡಿ.ಎಮ್ ಶಾಲಾ ಬೋಧಕ ವೃಂದಕ್ಕೆ ‘ಅನುಭವದ ಕಲಿಕೆ’ ಕಾರ್ಯಗಾರ ನಡೆಯಿತು.

ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಲರಾದ ಡಾ.ಎ ಜಯಕುಮಾರ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಎಸ್.ಡಿ.ಎಮ್ ತತ್ವಗಳು, ಶಿಕ್ಷಕ ವೃತ್ತಿಯ ಪಾವಿತ್ರ್ಯತೆಯ ಕುರಿತು ತಮ್ಮ ಮಾತುಗಳನ್ನು ಶಿಕ್ಷಕ ವೃಂದದೊಂದಿಗೆ ಹಂಚಿಕೊಂಡರು.

ಸಂಪನ್ಮೂಲ ವ್ಯಕ್ತಿಯಾಗಿ ನೋಲ್ಡನ್ಬ್ರಿಡ್ಜ್ ಫೌಂಡೇಶನ್ ಸಹ ಸಂಸ್ಥಾಪಕ ಮತ್ತು ನಿರ್ದೇಶಕ ಸೋಜೊ ವರ್ಗಿಸ್ ಇವರು ತರಗತಿಯಲ್ಲಿ ಅನುಭವ ಕಲಿಕೆಯ ಕುರಿತು ಪ್ರಾಯೋಗಿಕ ಕಲಿಕೆಯೊಂದಿಗೆ ಶಿಕ್ಷಕರಿಗೆ ಮಾಹಿತಿ ನೀಡಿದರು.

ಕಾರ್ಯಗಾರದ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಇವರು ಶಿಕ್ಷಕರಿಗೆ ಶುಭನುಡಿಗಳೊಂದಿಗೆ ‘ಶಿಕ್ಷಕರು ನಿರಂತರ ವಿದ್ಯಾರ್ಥಿಗಳಾಗಿರಬೇಕು’ ಎಂದು ಕಿವಿಮಾತು ಹೇಳಿದರು.

ಕಾರ್ಯಗಾರದಲ್ಲಿ ಶಿಕ್ಷಕಿಯರಾದ ಕಲ್ಯಾಣಿ ನಿರೂಪಿಸಿ, ಸುಜನ ವಂದಿಸಿ, ಭವ್ಯ ಹಾಗೂ ಚೇತನಾ ಅತಿಥಿ ಪರಿಚಯ, ರವೀನ ವಂದಿಸಿದರು.

Related posts

ನಡ ಸ.ಪ್ರೌ. ಶಾಲಾ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಕ್ರೀಡಾಪಟು ದಿನೇಶ್ ವೇಣೂರುರಿಂದ ಕ್ರೀಡಾ ಸ್ಪೈಕ್ ಶೂ ಕೊಡುಗೆ

Suddi Udaya

ಅ.2: ಭಾರತೀಯ ಭೂಸೇನೆಯಲ್ಲಿ ಸೇವೆ ಸಲ್ಲಿಸಿ ತಾಯ್ನಾಡಿಗೆ ಆಗಮಿಸುತ್ತಿರುವ ನಿವೃತ್ತ ಯೋಧ ಮಂಜುನಾಥ ಹಾಗೂ “ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ” ಪ್ರಶಸ್ತಿ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ:ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಪ್ರಕರಣ ಹಾಗೂ ಬಂದೂಕು ಪತ್ತೆ ಪ್ರಕರಣ : ಇಂದು ಹೈಕೋರ್ಟ್ ನಲ್ಲಿ ವಿಚಾರಣೆ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಶ್ರೀ ದೇವರ ಪ್ರತಿಷ್ಠೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ವತಿಯಿಂದ ವಿನೂತನ ಕಾರ್ಯಕ್ರಮ

Suddi Udaya

ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷರಿಗೆ ಕೊಯ್ಯೂರಿನ ಶ್ರೀ ಕೃಷ್ಣ ಭಜನಾ ಮಂಡಳಿಯಲ್ಲಿ ಅಭಿನಂದನೆ

Suddi Udaya
error: Content is protected !!