July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆಯ ತ್ರೈಮಾಸಿಕ ಸಭೆಯು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷ ಬಾಬುನಾಯ್ಕರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಒಕ್ಕೂಟದ ಅಧ್ಯಕ್ಷ ಸುರೇಶ್ ನಾಯ್ಕರವರು ಒಕ್ಕೂಟ ಸಭೆಯನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಪ್ರಕೃತಿ ಡಿ ತಂಡವು ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಸಾಕ್ಷಿ ಎಸ್.ಹೆಚ್.ಜಿ ಸಂಘವು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಂತಿಯವರು ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಲೋಲಾಕ್ಷಿರವರು ಮಂಡಿಸಿದರು,ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಹೇಮಲತಾರವರು ಉಪಸ್ಥಿತರಿದ್ದರು. ಪ್ರಮೀಳಾರವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಬೆಳ್ತಂಗಡಿ ತಾ| ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಕಡಿರುದ್ಯಾವರ: ನಿಯಂತ್ರಣ ತಪ್ಪಿ ಬಿದ್ದ ದ್ವಿಚಕ್ರ ವಾಹನ

Suddi Udaya
error: Content is protected !!