24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಮೇ 27 ರಂದು ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ.


ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ ಫಣಿಕಲ್ಲು ಕಡೆ ಮುಂದುವರೆದಿದೆ. ಅಲ್ಲಿ ರಾಘವೇಂದ್ರ ಪಟವರ್ಧನ್ ರವರ ತೋಟಕ್ಕೆ ಕಾಡಾನೆ ಬರುತ್ತಿದ್ದಂತೆ ಮನೆಯವರಿಗೆ ತಿಳಿದು ಬಂದ ಕಾರಣ ಸ್ಥಳೀಯರು ಸೇರಿ ಆನೆಯನ್ನು ಓಡಿಸಿ, ಬೆಳಗಿನವರೆಗೆ ಗಸ್ತು ತಿರುಗಿದ ಕಾರಣ ಯಾವುದೇ ಕೃಷಿಹಾನಿ ಸಂಭವಿಸಿಲ್ಲ. ಸಲಗ ಇಲ್ಲಿಗೆ ಸಮೀಪದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.


ಮೇ 26 ರಂದು ರಾತ್ರಿ ಕಾಡಾನೆ ಇದೇ ಗ್ರಾಮದ ಬಸವದಡ್ಡು ಪರಿಸರದ ತೋಟಗಳಲ್ಲಿ ಕೃಷಿಹಾನಿ ಉಂಟು ಮಾಡಿತ್ತು. ಬಸವದಡ್ಡು, ಮಿತ್ತಕಟ್ಟಾಜೆ, ಫಣಿಕಲ್ಲು, ಮುಂಡಾಜೆ, ದುಂಬೆಟ್ಟು ಪರಿಸರ ಹತ್ತಿರ ಹತ್ತಿರವಿದ್ದು ಕಾಡಾನೆ ಉಪಟಳ ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

Related posts

ವಲಯ ಸಮ್ಮೇಳನದಲ್ಲಿ ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ ಸಮಗ್ರ ಪ್ರಶಸ್ತಿ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ-9 ಸ್ಥಾನ,‌ ಕಾಂಗ್ರೆಸ್ ಬೆಂಬಲಿತ -3 ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕುವೆಟ್ಟು ಮಹಾಶಕ್ತಿ ಕೇಂದ್ರದ ಕೊಯ್ಯೂರು ಶಕ್ತಿಕೇಂದ್ರದಲ್ಲಿ ನಮೋ ಯುವ ಚೌಪಲ್ 400 ಯೋಜನೆಗಳ ಮಾಹಿತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಇನ್ಸ್ಪೆಕ್ಟರ್ ಗಂಗ್ಗಿರೆಡ್ಡಿಯನ್ನು ಸುಳ್ಳು ಪ್ರಕರಣದಲ್ಲಿ ಟ್ರ್ಯಾಪ್ ಮಾಡಿಸಿದ್ದ ದೂರುದಾರ ಹಾಗೂ ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಕುತ್ಲೂರು: ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!