25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಮೇ 27 ರಂದು ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ.


ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ ಫಣಿಕಲ್ಲು ಕಡೆ ಮುಂದುವರೆದಿದೆ. ಅಲ್ಲಿ ರಾಘವೇಂದ್ರ ಪಟವರ್ಧನ್ ರವರ ತೋಟಕ್ಕೆ ಕಾಡಾನೆ ಬರುತ್ತಿದ್ದಂತೆ ಮನೆಯವರಿಗೆ ತಿಳಿದು ಬಂದ ಕಾರಣ ಸ್ಥಳೀಯರು ಸೇರಿ ಆನೆಯನ್ನು ಓಡಿಸಿ, ಬೆಳಗಿನವರೆಗೆ ಗಸ್ತು ತಿರುಗಿದ ಕಾರಣ ಯಾವುದೇ ಕೃಷಿಹಾನಿ ಸಂಭವಿಸಿಲ್ಲ. ಸಲಗ ಇಲ್ಲಿಗೆ ಸಮೀಪದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.


ಮೇ 26 ರಂದು ರಾತ್ರಿ ಕಾಡಾನೆ ಇದೇ ಗ್ರಾಮದ ಬಸವದಡ್ಡು ಪರಿಸರದ ತೋಟಗಳಲ್ಲಿ ಕೃಷಿಹಾನಿ ಉಂಟು ಮಾಡಿತ್ತು. ಬಸವದಡ್ಡು, ಮಿತ್ತಕಟ್ಟಾಜೆ, ಫಣಿಕಲ್ಲು, ಮುಂಡಾಜೆ, ದುಂಬೆಟ್ಟು ಪರಿಸರ ಹತ್ತಿರ ಹತ್ತಿರವಿದ್ದು ಕಾಡಾನೆ ಉಪಟಳ ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

Related posts

ಹೊಸಂಗಡಿ: ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿ ವಿವೇಕ್ ಎನ್ ಡಿ ಎ ಕ್ಲಿಯರ್

Suddi Udaya

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಚಾತುರ್ಮಾಸ್ಯ ವೃತಾಚಾರಣೆ, ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ಮಹಾಮಂಡಲೇಶ್ವರ ಕನ್ಯಾಡಿ ಶ್ರೀಗಳ ಭೇಟಿ

Suddi Udaya

KCET, NEET ಹಾಗೂ JEE (Mains) ಪರೀಕ್ಷೆಗಳಿಗಾಗಿ ಮಾ.18ರಿಂದ ವಿದ್ವತ್‌ ಕಾಲೇಜಿನಲ್ಲಿ ಕ್ರ್ಯಾಶ್ ಕೋರ್ಸ್ ಆರಂಭ

Suddi Udaya
error: Content is protected !!