30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಸೌತಡ್ಕದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ಅಬ್ದುಲ್ ರಜಾಕ್ ರವರ ಅಧ್ಯಕ್ಷತೆಯಲ್ಲಿ ಹಳ್ಳಿoಗೇರಿ ಸಮುದಾಯ ಭವನದಲ್ಲಿ ನಡೆಯಿತು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಪ್ರಗತಿ ಸಂಘವು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಲಕ್ಷ್ಮಿಯವರು ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಅಶ್ವಿನಿರವರು ಮಂಡಿಸಿದರು, ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಕೃಷಿಯನ್ನು ಆಧುನಿಕವಾಗಿ ಅನುಷ್ಠಾನಿಸುವ ಬಗ್ಗೆ ಮಾಹಿತಿಯನ್ನು ನೀಡಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿಯವರು ಹಾಗೂ ಮಾಜಿ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಸದಸ್ಯರು ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಕುಸುಮ ಎಸ್ ರವರು ಉಪಸ್ಥಿತರಿದ್ದರು.

ಮಾಲತಿಯವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಧರ್ಮಸ್ಥಳದಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya
error: Content is protected !!