23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ : ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಸಿ. ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಶ್ರೀನಿಲಯದಲ್ಲಿ ಪುತ್ತೂರು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಮತ್ತು
ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು. ಶ್ರೀಮತಿ ಸ್ವರ್ಣಲತಾ ಭಾಸ್ಕರ್ ಉಪಸ್ಥಿತರಿದ್ದರು.

88 ವರ್ಷದ ಹಿರಿಯ ವಿದ್ವಾಂಸರಾದ ಶಾಸ್ತ್ರಿಯವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ, ದಶಾವತಾರ ಉಪನ್ಯಾಸಗಳು, ಅರ್ಥ ಸಹಿತ ಕುಮಾರ ವಿಜಯ ಮುಂತಾದ ಅಪೂರ್ವ ಕೃತಿಗಳನ್ನು ರಚಿಸಿದ್ದು ಯಕ್ಷಗಾನ ಆಸಕ್ತರಿಗೆ ಉಪಯುಕ್ತವಾದ ಕೃತಿಗಳಾಗಿವೆ.

ಶೇಣಿ ,ಸಾಮಗ, ಪೆರ್ಲ, ಕಾಂತ ರೈ , ಜೋಷಿ ಮೊದಲಾದ ಮಹಾನ್ ಕಲಾವಿದರೊಂದಿಗೆ ಅರ್ಥಧಾರಿಯಾಗಿ ಜನಪ್ರಿಯ ರಾಗಿದ್ದ ಇವರು ಕಳೆದ ಮೂರು ವರ್ಷಗಳಿಂದ ತಾಳಮದ್ದಳೆಯಲ್ಲಿ ಭಾಗವಹಿಸದೆ ಇದ್ದರೂ ವಿಶ್ರಾಂತ ಜೀವನದಲ್ಲಿ ತನ್ನ ಜ್ಞಾನ,ಅನುಭವಗಳನ್ನು ಕಲಾಸಕ್ತರ ಜೊತೆ ಹಂಚಿಕೊಳ್ಳುತ್ತ ಸಕ್ರಿಯವಾಗಿದ್ದಾರೆ.

Related posts

ಕುಪ್ಪೆಟ್ಟಿ ಶ್ರೀ ಗಣೇಶ ಭಜನಾ ಮಂದಿರದಿಂದ ಶಾಲಾ ಮಕ್ಕಳಿಗೆ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಕೆ ಎನ್ ಆಯ್ಕೆ

Suddi Udaya

ಇಂದಬೆಟ್ಟು: ಮನ್ನಡ್ಕ ನಿವಾಸಿ ಮಿನ್ಕಿ ಗೌಡ ನಿಧನ

Suddi Udaya

ತೋಟತ್ತಾಡಿ: ಶಿವದಾಸ ಎಂ.ಎ. ನಿಧನ

Suddi Udaya

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಧರ್ಮಸ್ಥಳ: ಮುಳಿಕ್ಕಾರ್ ಭಾರಿ ಗಾಳಿ ಮಳೆಗೆ ಹಾನಿಯಾದ ಮನೆಗೆ ಧರ್ಮಸ್ಥಳ ಗ್ರಾ.ಪಂ. ನಿಂದ ಆರ್ಥಿಕ ನೆರವು

Suddi Udaya
error: Content is protected !!