28.3 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ : ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಸಿ. ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಶ್ರೀನಿಲಯದಲ್ಲಿ ಪುತ್ತೂರು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಮತ್ತು
ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು. ಶ್ರೀಮತಿ ಸ್ವರ್ಣಲತಾ ಭಾಸ್ಕರ್ ಉಪಸ್ಥಿತರಿದ್ದರು.

88 ವರ್ಷದ ಹಿರಿಯ ವಿದ್ವಾಂಸರಾದ ಶಾಸ್ತ್ರಿಯವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ, ದಶಾವತಾರ ಉಪನ್ಯಾಸಗಳು, ಅರ್ಥ ಸಹಿತ ಕುಮಾರ ವಿಜಯ ಮುಂತಾದ ಅಪೂರ್ವ ಕೃತಿಗಳನ್ನು ರಚಿಸಿದ್ದು ಯಕ್ಷಗಾನ ಆಸಕ್ತರಿಗೆ ಉಪಯುಕ್ತವಾದ ಕೃತಿಗಳಾಗಿವೆ.

ಶೇಣಿ ,ಸಾಮಗ, ಪೆರ್ಲ, ಕಾಂತ ರೈ , ಜೋಷಿ ಮೊದಲಾದ ಮಹಾನ್ ಕಲಾವಿದರೊಂದಿಗೆ ಅರ್ಥಧಾರಿಯಾಗಿ ಜನಪ್ರಿಯ ರಾಗಿದ್ದ ಇವರು ಕಳೆದ ಮೂರು ವರ್ಷಗಳಿಂದ ತಾಳಮದ್ದಳೆಯಲ್ಲಿ ಭಾಗವಹಿಸದೆ ಇದ್ದರೂ ವಿಶ್ರಾಂತ ಜೀವನದಲ್ಲಿ ತನ್ನ ಜ್ಞಾನ,ಅನುಭವಗಳನ್ನು ಕಲಾಸಕ್ತರ ಜೊತೆ ಹಂಚಿಕೊಳ್ಳುತ್ತ ಸಕ್ರಿಯವಾಗಿದ್ದಾರೆ.

Related posts

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya

ಪಟ್ರಮೆ: ಚಾಲಕನ ನಿಯಂತ್ರಣ ತಪ್ಪಿ ಹೊಳೆ ಬದಿಗೆ ಬಿದ್ದ ಕಾರು

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya

ಧರ್ಮಸ್ಥಳ ಮಂಜೂಷಾ ವಸ್ತುಸಂಗ್ರಹಾಲಯದಲ್ಲಿ ಪ್ರಾಚೀನ ಭಾರತದ ನಾಣ್ಯಗಳ ಪ್ರದರ್ಶನಕ್ಕೆ ಚಾಲನೆ

Suddi Udaya

ಕೊರಂ ಕೊರತೆ : ಮೇಲಂತಬೆಟ್ಟು ಗ್ರಾಮ ಸಭೆ ಮುಂದೂಡಿಕೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!