23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಬೆಳ್ತಂಗಡಿ; ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಪ್ರತಿಭಟಿಸಿದ್ದ ಶಾಸಕ ಹರೀಶ್ ರ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28. ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್ ) ಸಲ್ಲಿಸಿದ್ದಾರೆ.
ಪ್ರಕರಣದ ತನಿಖೆಗಾಗಿ ಎಸ್.ಪಿ ಅವರಿಂದ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಜಿ.ಜೆ‌ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಈ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಬಿಜೆಪಿ ಯುವ ಮೋರ್ಚಾದ ನಾಯಕರುಗಳಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಉಜಿರೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಈ ಪೈಕಿ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ನಡೆದ ಪ್ರತಿಭಟನೆಯ ವೇಳೆ ಶಾಸಕ ಹರೀಶ್ ಪೂಂಜ ಅವರು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದೂ ಮಾತ್ರವಲ್ಲದೆ ಪೊಲೀಸರ ವಿರುದ್ಧ ಅಸಂವಿಧಾನಿಕ ಪದ ಬಳಸಿ‌ ನಿಂದಿಸಿದ್ದರು ಎಂದು ಒಂದು ಪ್ರಕರಣ ದಾಖಲಾಗಿತ್ತು.
ಈ ವಿಚಾರವನ್ನು ಖಂಡಿಸಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಆಡಳಿತ ಸೌಧದ ಬಳಿ ನಡೆದಿದ್ದ ಪ್ರತಿಭಟನೆಯ ವೇಳೆ ಮತ್ತೆ ಶಾಸಕರು ಪೊಲೀಸರ ವಿರುದ್ಧವೇ ಹರಿಹಾಯ್ದ ಬಗ್ಗೆ ಎರಡನೇ ಎಫ್ ಐ ಆರ್ ದಾಖಲಾಗಿತ್ತು.


ಈ ಸಂಬಂಧವಾಗಿ ಶಾಸಕರಿಗೆ ನೋಟೀಸು ನೀಡಿ ಠಾಣೆಗೆ ವಿಚಾರಣೆಗೆ ಕರತರಲು ಪೊಲೀಸರು ಮನೆಗೆ ತೆರಳಿದ್ದ ವೇಳೆ ಅಲ್ಲೂ ಸಾವಿರಾರು ಜನ ಜಮಾಯಿಸಿ ಹೈ ಡ್ರಾಮಾ ನಡೆದಿತ್ತು.
ಈ ಎರಡೂ ಪ್ರಕರಣಗಳ ತ್ವರಿತ ತನಿಖೆಗೆ ಎಸ್.ಪಿ‌ ಅವರು ನಿಯೋಜಿಸಿದ ತಂಡ ಇದೀಗ ತನಿಖೆ ಪೂರ್ತಿಗೊಳಿಸಿದ್ದು, ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ದ.ಕ ಜಿಲ್ಲಾ ಅಧಿಕಾರಿ ಜಿನೇಂದ್ರ ಕೋಟ್ಯಾನ್ ಬೆಳ್ತಂಗಡಿ ತಾಲೂಕಿನ ವಿವಿಧ ಬಸದಿಗಳಿಗೆ ಭೇಟಿ

Suddi Udaya

ಬೆಳ್ತಂಗಡಿ ಮಂಜುಶ್ರೀ ಸೀನಿಯರ್ ಛೇoಬರಿಗೆ “ರಾಷ್ಟ್ರೀಯ ಅಧ್ಯಕ್ಷರ ಭೇಟಿ

Suddi Udaya

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya
error: Content is protected !!