25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆಯ ತ್ರೈಮಾಸಿಕ ಸಭೆಯು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷ ಬಾಬುನಾಯ್ಕರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಒಕ್ಕೂಟದ ಅಧ್ಯಕ್ಷ ಸುರೇಶ್ ನಾಯ್ಕರವರು ಒಕ್ಕೂಟ ಸಭೆಯನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಪ್ರಕೃತಿ ಡಿ ತಂಡವು ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಸಾಕ್ಷಿ ಎಸ್.ಹೆಚ್.ಜಿ ಸಂಘವು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಂತಿಯವರು ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಲೋಲಾಕ್ಷಿರವರು ಮಂಡಿಸಿದರು,ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಹೇಮಲತಾರವರು ಉಪಸ್ಥಿತರಿದ್ದರು. ಪ್ರಮೀಳಾರವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಉಜಿರೆ ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್‌ ಸಯನ್ಸ್‌ ಉಪನ್ಯಾಸಕಿ ಸುಚೇತಾರವರಿಗೆ ಪಿ.ಎಚ್.ಡಿ ಪದವಿ

Suddi Udaya

ವೇಣೂರು: ಬಜಿರೆ ನಿವಾಸಿ ಹೊನ್ನಮ್ಮ ನಿಧನ

Suddi Udaya

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya

ಸುಬ್ರಹ್ಮಣ್ಯದಲ್ಲಿ ಡೆಂಗು ಹಾಗೂ ಸಾಂಕ್ರಾಮಿಕ ರೋಗ ಹರಡದಂತೆ ಸ್ವಚ್ಛತಾ ಕಾರ್ಯ

Suddi Udaya
error: Content is protected !!