July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ವಲಯದ ಬದನಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಬದನಾಜೆಯ ತ್ರೈಮಾಸಿಕ ಸಭೆಯು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಶಾಲೆಯಲ್ಲಿ ಒಕ್ಕೂಟದ ಅಧ್ಯಕ್ಷ ಬಾಬುನಾಯ್ಕರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೂತನ ಒಕ್ಕೂಟದ ಅಧ್ಯಕ್ಷ ಸುರೇಶ್ ನಾಯ್ಕರವರು ಒಕ್ಕೂಟ ಸಭೆಯನ್ನು ದೀಪ ಪ್ರಜ್ವಲಿಸಿ ಉದ್ಘಾಟಿಸಿದರು.

ಪ್ರಕೃತಿ ಡಿ ತಂಡವು ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಸಾಕ್ಷಿ ಎಸ್.ಹೆಚ್.ಜಿ ಸಂಘವು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಂತಿಯವರು ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಲೋಲಾಕ್ಷಿರವರು ಮಂಡಿಸಿದರು,ವಲಯ ಮೇಲ್ವಿಚಾರಕರಾದ ಶ್ರೀಮತಿ ವನಿತಾರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಒಕ್ಕೂಟದ ಪದಾಧಿಕಾರಿಗಳು, ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಹೇಮಲತಾರವರು ಉಪಸ್ಥಿತರಿದ್ದರು. ಪ್ರಮೀಳಾರವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಸುಲ್ಕೇರಿಮೊಗ್ರು: ವಿಶಿಷ್ಟ ಸಾಧಕ ರಘು ಮಾಳಿಗೆ ನಿಧನ

Suddi Udaya

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಗುರುವಾಯನಕೆರೆ ಶಕ್ತಿನಗರ ಬಳಿ ಅಪಘಾತ- ಬೈಕ್‌ ಸವಾರನಿಗೆ ಗಾಯ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya
error: Content is protected !!