23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಮೇ 27 ರಂದು ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ.


ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ ಫಣಿಕಲ್ಲು ಕಡೆ ಮುಂದುವರೆದಿದೆ. ಅಲ್ಲಿ ರಾಘವೇಂದ್ರ ಪಟವರ್ಧನ್ ರವರ ತೋಟಕ್ಕೆ ಕಾಡಾನೆ ಬರುತ್ತಿದ್ದಂತೆ ಮನೆಯವರಿಗೆ ತಿಳಿದು ಬಂದ ಕಾರಣ ಸ್ಥಳೀಯರು ಸೇರಿ ಆನೆಯನ್ನು ಓಡಿಸಿ, ಬೆಳಗಿನವರೆಗೆ ಗಸ್ತು ತಿರುಗಿದ ಕಾರಣ ಯಾವುದೇ ಕೃಷಿಹಾನಿ ಸಂಭವಿಸಿಲ್ಲ. ಸಲಗ ಇಲ್ಲಿಗೆ ಸಮೀಪದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.


ಮೇ 26 ರಂದು ರಾತ್ರಿ ಕಾಡಾನೆ ಇದೇ ಗ್ರಾಮದ ಬಸವದಡ್ಡು ಪರಿಸರದ ತೋಟಗಳಲ್ಲಿ ಕೃಷಿಹಾನಿ ಉಂಟು ಮಾಡಿತ್ತು. ಬಸವದಡ್ಡು, ಮಿತ್ತಕಟ್ಟಾಜೆ, ಫಣಿಕಲ್ಲು, ಮುಂಡಾಜೆ, ದುಂಬೆಟ್ಟು ಪರಿಸರ ಹತ್ತಿರ ಹತ್ತಿರವಿದ್ದು ಕಾಡಾನೆ ಉಪಟಳ ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

Related posts

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿರಾಡಿ ಘಾಟ್ ನಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya

ಬಿ.ವಿ.ಎಫ್. ಬೆಳ್ತಂಗಡಿ ತಾ. ಘಟಕದಿಂದ ’ಭಾರತೀಯ ಸಂವಿಧಾನ ದಿನಾಚರಣೆ’

Suddi Udaya
error: Content is protected !!