September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಮೇ 27 ರಂದು ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ.


ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ ಫಣಿಕಲ್ಲು ಕಡೆ ಮುಂದುವರೆದಿದೆ. ಅಲ್ಲಿ ರಾಘವೇಂದ್ರ ಪಟವರ್ಧನ್ ರವರ ತೋಟಕ್ಕೆ ಕಾಡಾನೆ ಬರುತ್ತಿದ್ದಂತೆ ಮನೆಯವರಿಗೆ ತಿಳಿದು ಬಂದ ಕಾರಣ ಸ್ಥಳೀಯರು ಸೇರಿ ಆನೆಯನ್ನು ಓಡಿಸಿ, ಬೆಳಗಿನವರೆಗೆ ಗಸ್ತು ತಿರುಗಿದ ಕಾರಣ ಯಾವುದೇ ಕೃಷಿಹಾನಿ ಸಂಭವಿಸಿಲ್ಲ. ಸಲಗ ಇಲ್ಲಿಗೆ ಸಮೀಪದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.


ಮೇ 26 ರಂದು ರಾತ್ರಿ ಕಾಡಾನೆ ಇದೇ ಗ್ರಾಮದ ಬಸವದಡ್ಡು ಪರಿಸರದ ತೋಟಗಳಲ್ಲಿ ಕೃಷಿಹಾನಿ ಉಂಟು ಮಾಡಿತ್ತು. ಬಸವದಡ್ಡು, ಮಿತ್ತಕಟ್ಟಾಜೆ, ಫಣಿಕಲ್ಲು, ಮುಂಡಾಜೆ, ದುಂಬೆಟ್ಟು ಪರಿಸರ ಹತ್ತಿರ ಹತ್ತಿರವಿದ್ದು ಕಾಡಾನೆ ಉಪಟಳ ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

Related posts

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಹತ್ಯಡ್ಕ: ನಾವಳೆಯಲ್ಲಿ ಸಂಪನ್ನಗೊಂಡ ಉಚಿತ ಟೈಲರಿಂಗ್ ತರಬೇತಿ ಶಿಬಿರ

Suddi Udaya

ಅಳದಂಗಡಿ ಶ್ರೀ‌ ಸತ್ಯಸಾರಮುಪ್ಪಣ್ಯ ದೈವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ

Suddi Udaya

ಪಡ್ಡಂದಡ್ಕ ಮಿಲದುನ್ನೆಬಿ ಪ್ರಯುಕ್ತ ಮದರಸ ಮಕ್ಕಳ ಪ್ರತಿಭಾ ಪ್ರದರ್ಶನ

Suddi Udaya

ಬೆಳ್ತಂಗಡಿ: ತಾಲೂಕು ಮಹಿಳಾ ವೇದಿಕೆ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ತಡೆ ಕೋರಿದ್ದ ಅರ್ಜಿ ವಿಚಾರಣೆ; ತೀರ್ಪು ಬರುವವರೆಗೆ ಬಲವಂತದ ಕ್ರಮ ಬೇಡ ಹೈಕೋರ್ಟ್ ಆದೇಶ

Suddi Udaya
error: Content is protected !!