23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಮೇ 27 ರಂದು ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ.


ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ ಫಣಿಕಲ್ಲು ಕಡೆ ಮುಂದುವರೆದಿದೆ. ಅಲ್ಲಿ ರಾಘವೇಂದ್ರ ಪಟವರ್ಧನ್ ರವರ ತೋಟಕ್ಕೆ ಕಾಡಾನೆ ಬರುತ್ತಿದ್ದಂತೆ ಮನೆಯವರಿಗೆ ತಿಳಿದು ಬಂದ ಕಾರಣ ಸ್ಥಳೀಯರು ಸೇರಿ ಆನೆಯನ್ನು ಓಡಿಸಿ, ಬೆಳಗಿನವರೆಗೆ ಗಸ್ತು ತಿರುಗಿದ ಕಾರಣ ಯಾವುದೇ ಕೃಷಿಹಾನಿ ಸಂಭವಿಸಿಲ್ಲ. ಸಲಗ ಇಲ್ಲಿಗೆ ಸಮೀಪದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.


ಮೇ 26 ರಂದು ರಾತ್ರಿ ಕಾಡಾನೆ ಇದೇ ಗ್ರಾಮದ ಬಸವದಡ್ಡು ಪರಿಸರದ ತೋಟಗಳಲ್ಲಿ ಕೃಷಿಹಾನಿ ಉಂಟು ಮಾಡಿತ್ತು. ಬಸವದಡ್ಡು, ಮಿತ್ತಕಟ್ಟಾಜೆ, ಫಣಿಕಲ್ಲು, ಮುಂಡಾಜೆ, ದುಂಬೆಟ್ಟು ಪರಿಸರ ಹತ್ತಿರ ಹತ್ತಿರವಿದ್ದು ಕಾಡಾನೆ ಉಪಟಳ ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

Related posts

ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ

Suddi Udaya

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಧರ್ಮಸ್ಥಳದ ಅಶೋಕನಗರ ಅಭಿವೃದ್ಧಿಗಾಗಿ ರೂ.2.41 ಕೋಟಿ ಅನುದಾನದ ಕಾಮಗಾರಿಗೆ ಶಂಕು ಸ್ಥಾಪನೆ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ತಾಲೂಕು ಮಟ್ಟದ ಇಲಾಖಾಧಿಕಾರಿಗಳ ಜೊತೆ ಪ್ರಗತಿ ಪರಿಶೀಲನಾ ಸಭೆ

Suddi Udaya

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya
error: Content is protected !!