July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ


ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಹಲವೆಡೆ ಮೇ 27 ರಂದು ರಾತ್ರಿ ಒಂಟಿ ಸಲಗನ ಸಂಚಾರ ಮುಂದುವರಿದಿದೆ.


ಇಲ್ಲಿನ ಮಿತ್ತಕಟ್ಟಾಜೆ ಮೋಹನ ನಾಯ್ಕ ಎಂಬವರ ಮನೆಯಂಗಳಕ್ಕೆ ಬಂದು ಬಾಳೆ ಗಿಡ ತಿಂದು ಹಾಕಿದ ಬಳಿಕ ಸಲಗ ಫಣಿಕಲ್ಲು ಕಡೆ ಮುಂದುವರೆದಿದೆ. ಅಲ್ಲಿ ರಾಘವೇಂದ್ರ ಪಟವರ್ಧನ್ ರವರ ತೋಟಕ್ಕೆ ಕಾಡಾನೆ ಬರುತ್ತಿದ್ದಂತೆ ಮನೆಯವರಿಗೆ ತಿಳಿದು ಬಂದ ಕಾರಣ ಸ್ಥಳೀಯರು ಸೇರಿ ಆನೆಯನ್ನು ಓಡಿಸಿ, ಬೆಳಗಿನವರೆಗೆ ಗಸ್ತು ತಿರುಗಿದ ಕಾರಣ ಯಾವುದೇ ಕೃಷಿಹಾನಿ ಸಂಭವಿಸಿಲ್ಲ. ಸಲಗ ಇಲ್ಲಿಗೆ ಸಮೀಪದ ಅರಣ್ಯದಲ್ಲಿ ಬೀಡು ಬಿಟ್ಟಿರುವ ಶಂಕೆ ವ್ಯಕ್ತವಾಗಿದೆ.


ಮೇ 26 ರಂದು ರಾತ್ರಿ ಕಾಡಾನೆ ಇದೇ ಗ್ರಾಮದ ಬಸವದಡ್ಡು ಪರಿಸರದ ತೋಟಗಳಲ್ಲಿ ಕೃಷಿಹಾನಿ ಉಂಟು ಮಾಡಿತ್ತು. ಬಸವದಡ್ಡು, ಮಿತ್ತಕಟ್ಟಾಜೆ, ಫಣಿಕಲ್ಲು, ಮುಂಡಾಜೆ, ದುಂಬೆಟ್ಟು ಪರಿಸರ ಹತ್ತಿರ ಹತ್ತಿರವಿದ್ದು ಕಾಡಾನೆ ಉಪಟಳ ಸ್ಥಳೀಯರಲ್ಲಿ ಭೀತಿ ಮೂಡಿಸಿದೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ನಿಡ್ಲೆ : ಅಗ್ರಿಲೀಫ್ ಎಕ್ಸ್‌ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ

Suddi Udaya

ಕೊಕ್ಕಡ: ನಿವೃತ್ತ ಶಿಕ್ಷಕರ ಬೀಳ್ಕೊಡುಗೆ ಸಮಾರಂಭ ಹಾಗೂ ನಿವೃತ್ತ ಸೈನಿಕ ಕೆ. ಮಹಾಬಲರವರಿಗೆ ಅಭಿನಂದನೆ

Suddi Udaya

ಕೊಯ್ಯೂರು ಕೃಷಿ ಭೂಮಿಯೊಳಗೆ ಅರಣ್ಯ ಇಲಾಖೆಯಿಂದ ಕಲ್ಲಿನ ಗುಪ್ಪೆ: ಕೃಷಿಕರಲ್ಲಿ ಆತಂಕ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ: ರಾತ್ರಿ ಮೂಡಪ್ಪ ಸೇವೆ

Suddi Udaya
error: Content is protected !!