23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಸೌತಡ್ಕದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ಅಬ್ದುಲ್ ರಜಾಕ್ ರವರ ಅಧ್ಯಕ್ಷತೆಯಲ್ಲಿ ಹಳ್ಳಿoಗೇರಿ ಸಮುದಾಯ ಭವನದಲ್ಲಿ ನಡೆಯಿತು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಪ್ರಗತಿ ಸಂಘವು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಜಯಲಕ್ಷ್ಮಿಯವರು ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಅಶ್ವಿನಿರವರು ಮಂಡಿಸಿದರು, ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್ ರವರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂ ಕೃಷಿಯನ್ನು ಆಧುನಿಕವಾಗಿ ಅನುಷ್ಠಾನಿಸುವ ಬಗ್ಗೆ ಮಾಹಿತಿಯನ್ನು ನೀಡಿದರು. ವಲಯ ಮೇಲ್ವಿಚಾರಕರಾದ ಶ್ರೀಮತಿ ಭಾಗೀರಥಿಯವರು ಹಾಗೂ ಮಾಜಿ ಒಕ್ಕೂಟದ ಅಧ್ಯಕ್ಷರು, ಒಕ್ಕೂಟದ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಸದಸ್ಯರು ದಾಖಲಾತಿ ಸಮಿತಿಯ ಸದಸ್ಯರು, ಎಲ್ಲಾ ಸಂಘದ ಸದಸ್ಯರು, ಸೇವಾಪ್ರತಿನಿಧಿ ಕುಸುಮ ಎಸ್ ರವರು ಉಪಸ್ಥಿತರಿದ್ದರು.

ಮಾಲತಿಯವರು ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಆಶಾಕೇಂದ್ರವಾಗಲಿದೆ ಬೈಂದೂರಿನ ಹೇನಬೇರು ಶಾಲೆ

Suddi Udaya

ಶ್ವೇತ ಸಮೂಹ ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಧರ್ಮಸ್ಥಳ: ಮುಳಿಕ್ಕರ್ ನಲ್ಲಿ ತೋಟ ಹಾಗೂ ಗದ್ದೆಗಳಿಗೆ ಲಗ್ಗೆ ಇಟ್ಟ ಕಾಡಾನೆ: ಅಪಾರ ಕೃಷಿ ನಾಶ

Suddi Udaya

ಬರೆಂಗಾಯ ಸ.ಉ.ಹಿ.ಪ್ರಾ. ಶಾಲೆಯಲ್ಲಿ 75ನೇ ವರ್ಷದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ

Suddi Udaya

ನಾರಾವಿ ಬಿಜೆಪಿ ಕಾರ್ಯಾಲಯದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಅ. 29: ಅಳದಂಗಡಿ ಪ್ರಾ.ಕೃ.ಪ.ಸ. ಸಂಘ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya
error: Content is protected !!