ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ : ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಸಿ. ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಶ್ರೀನಿಲಯದಲ್ಲಿ ಪುತ್ತೂರು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಮತ್ತು
ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು. ಶ್ರೀಮತಿ ಸ್ವರ್ಣಲತಾ ಭಾಸ್ಕರ್ ಉಪಸ್ಥಿತರಿದ್ದರು.

88 ವರ್ಷದ ಹಿರಿಯ ವಿದ್ವಾಂಸರಾದ ಶಾಸ್ತ್ರಿಯವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ, ದಶಾವತಾರ ಉಪನ್ಯಾಸಗಳು, ಅರ್ಥ ಸಹಿತ ಕುಮಾರ ವಿಜಯ ಮುಂತಾದ ಅಪೂರ್ವ ಕೃತಿಗಳನ್ನು ರಚಿಸಿದ್ದು ಯಕ್ಷಗಾನ ಆಸಕ್ತರಿಗೆ ಉಪಯುಕ್ತವಾದ ಕೃತಿಗಳಾಗಿವೆ.

ಶೇಣಿ ,ಸಾಮಗ, ಪೆರ್ಲ, ಕಾಂತ ರೈ , ಜೋಷಿ ಮೊದಲಾದ ಮಹಾನ್ ಕಲಾವಿದರೊಂದಿಗೆ ಅರ್ಥಧಾರಿಯಾಗಿ ಜನಪ್ರಿಯ ರಾಗಿದ್ದ ಇವರು ಕಳೆದ ಮೂರು ವರ್ಷಗಳಿಂದ ತಾಳಮದ್ದಳೆಯಲ್ಲಿ ಭಾಗವಹಿಸದೆ ಇದ್ದರೂ ವಿಶ್ರಾಂತ ಜೀವನದಲ್ಲಿ ತನ್ನ ಜ್ಞಾನ,ಅನುಭವಗಳನ್ನು ಕಲಾಸಕ್ತರ ಜೊತೆ ಹಂಚಿಕೊಳ್ಳುತ್ತ ಸಕ್ರಿಯವಾಗಿದ್ದಾರೆ.

Related posts

ಅಳದಂಗಡಿಯ ವಿದುಷಿ ವಿದ್ಯಾಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್‌ನ ವತಿಯಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

Suddi Udaya

ಗುರುವಾಯನಕೆರೆ ಅರಣ್ಯ ವೀಕ್ಷಕ ಗಫೂರ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಸರ್ಕಾರಿ ಮಾದರಿ ಹಿ.ಪ್ರಾ ಶಾಲೆಯಲ್ಲಿ ಸಂಭ್ರಮ ಶನಿವಾರಕ್ಕೆ ಚಾಲನೆ

Suddi Udaya

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲದಿಂದ 31ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಉತ್ಸವ

Suddi Udaya

ಜೂ.30ರಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಅಭಿಯಾನ ಆರಂಭ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!