25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ : ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಸಿ. ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಶ್ರೀನಿಲಯದಲ್ಲಿ ಪುತ್ತೂರು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಮತ್ತು
ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು. ಶ್ರೀಮತಿ ಸ್ವರ್ಣಲತಾ ಭಾಸ್ಕರ್ ಉಪಸ್ಥಿತರಿದ್ದರು.

88 ವರ್ಷದ ಹಿರಿಯ ವಿದ್ವಾಂಸರಾದ ಶಾಸ್ತ್ರಿಯವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ, ದಶಾವತಾರ ಉಪನ್ಯಾಸಗಳು, ಅರ್ಥ ಸಹಿತ ಕುಮಾರ ವಿಜಯ ಮುಂತಾದ ಅಪೂರ್ವ ಕೃತಿಗಳನ್ನು ರಚಿಸಿದ್ದು ಯಕ್ಷಗಾನ ಆಸಕ್ತರಿಗೆ ಉಪಯುಕ್ತವಾದ ಕೃತಿಗಳಾಗಿವೆ.

ಶೇಣಿ ,ಸಾಮಗ, ಪೆರ್ಲ, ಕಾಂತ ರೈ , ಜೋಷಿ ಮೊದಲಾದ ಮಹಾನ್ ಕಲಾವಿದರೊಂದಿಗೆ ಅರ್ಥಧಾರಿಯಾಗಿ ಜನಪ್ರಿಯ ರಾಗಿದ್ದ ಇವರು ಕಳೆದ ಮೂರು ವರ್ಷಗಳಿಂದ ತಾಳಮದ್ದಳೆಯಲ್ಲಿ ಭಾಗವಹಿಸದೆ ಇದ್ದರೂ ವಿಶ್ರಾಂತ ಜೀವನದಲ್ಲಿ ತನ್ನ ಜ್ಞಾನ,ಅನುಭವಗಳನ್ನು ಕಲಾಸಕ್ತರ ಜೊತೆ ಹಂಚಿಕೊಳ್ಳುತ್ತ ಸಕ್ರಿಯವಾಗಿದ್ದಾರೆ.

Related posts

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಬಾರ್ಯ ಪ್ಯಾಕ್ಸ್ ಚುನಾವಣೆ: 12 ಸ್ಥಾನಗಳಿಗೆ ಅಂತಿಮ ಕಣದಲ್ಲಿ24 ಮಂದಿ ಅಭ್ಯರ್ಥಿಗಳು: ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಪೈಪೋಟಿ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ಕೋರ್ಟ್ ಗೆ ಹಾಜರು

Suddi Udaya

ಜೆಇಇ ಫಲಿತಾಂಶ: ಎಕ್ಸೆಲ್ ಕಾಲೇಜಿಗೆ ಅಖಿಲ ಭಾರತ ರ‍್ಯಾಂಕ್ 57

Suddi Udaya

ದೇಶದ ಆರ್ಥಿಕತೆಯ ಸುಧಾರಣೆಯಲ್ಲಿ ಇಂದಿರಾಗಾಂಧಿ ಮಹತ್ವದ ಕೊಡುಗೆ : ರಕ್ಷಿತ್ ಶಿವರಾಂ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!