23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

ಬೆಳ್ತಂಗಡಿ : ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಸಿ. ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಶ್ರೀನಿಲಯದಲ್ಲಿ ಪುತ್ತೂರು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಮತ್ತು
ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು. ಶ್ರೀಮತಿ ಸ್ವರ್ಣಲತಾ ಭಾಸ್ಕರ್ ಉಪಸ್ಥಿತರಿದ್ದರು.

88 ವರ್ಷದ ಹಿರಿಯ ವಿದ್ವಾಂಸರಾದ ಶಾಸ್ತ್ರಿಯವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ, ದಶಾವತಾರ ಉಪನ್ಯಾಸಗಳು, ಅರ್ಥ ಸಹಿತ ಕುಮಾರ ವಿಜಯ ಮುಂತಾದ ಅಪೂರ್ವ ಕೃತಿಗಳನ್ನು ರಚಿಸಿದ್ದು ಯಕ್ಷಗಾನ ಆಸಕ್ತರಿಗೆ ಉಪಯುಕ್ತವಾದ ಕೃತಿಗಳಾಗಿವೆ.

ಶೇಣಿ ,ಸಾಮಗ, ಪೆರ್ಲ, ಕಾಂತ ರೈ , ಜೋಷಿ ಮೊದಲಾದ ಮಹಾನ್ ಕಲಾವಿದರೊಂದಿಗೆ ಅರ್ಥಧಾರಿಯಾಗಿ ಜನಪ್ರಿಯ ರಾಗಿದ್ದ ಇವರು ಕಳೆದ ಮೂರು ವರ್ಷಗಳಿಂದ ತಾಳಮದ್ದಳೆಯಲ್ಲಿ ಭಾಗವಹಿಸದೆ ಇದ್ದರೂ ವಿಶ್ರಾಂತ ಜೀವನದಲ್ಲಿ ತನ್ನ ಜ್ಞಾನ,ಅನುಭವಗಳನ್ನು ಕಲಾಸಕ್ತರ ಜೊತೆ ಹಂಚಿಕೊಳ್ಳುತ್ತ ಸಕ್ರಿಯವಾಗಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಲೋತ್ಸವ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಶ್ರೀ ಪಿಲಿಚಾಮುಂಡಿ ದೈವಸ್ಥಾನ ಮಾಸ್ತಿ ಕಲ್ಲು ಮಜಲು ಗ್ರಾಮಸ್ಥರಿಂದ ಕಡಿರ ನಾಗನಕಟ್ಟೆ ನಿರ್ಮಿಸಿದ ಶಿಲ್ಪಿಗೆ ದೇಣಿಗೆ ಹಸ್ತಾಂತರ

Suddi Udaya

ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಕಾಡಾನೆ ನಿರಂತರ

Suddi Udaya

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಿಂದ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಅವಹೇಳನ ಮತ್ತು ಅಪಪ್ರಚಾರ ಮಾಡುವವರ ವಿರುದ್ಧ ಜಾನ್ ಡೋ ಆದೇಶ

Suddi Udaya

ಜಿಲ್ಲೆಯ ಹಾಸ್ಟೇಲ್‌ಗಳ ಸ್ಥಿತಿಗಳ ಬಗ್ಗೆ ವಿಧಾನ ಪರಿಷತ್ತಿನಲ್ಲಿ ಸದಸ್ಯ ಪ್ರತಾಪಸಿಂಹ ನಾಯಕ್‌ ಪ್ರಶ್ನೆ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ವತಿಯಿಂದ ಮುಗುಳಿ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ

Suddi Udaya
error: Content is protected !!