25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಾಸಕ ಹರೀಶ್ ಪೂಂಜರ ವಿರುದ್ಧ ಪ್ರಕರಣ: ಎರಡೂ ಕೇಸುಗಳ ಬಗ್ಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಬೆಳ್ತಂಗಡಿ; ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬೆಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಪ್ರತಿಭಟಿಸಿದ್ದ ಶಾಸಕ ಹರೀಶ್ ರ ವಿರುದ್ಧ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ.28. ರಂದು ದೋಷಾರೋಪಣಾ ಪಟ್ಟಿ (ಚಾರ್ಜ್ ಶೀಟ್ ) ಸಲ್ಲಿಸಿದ್ದಾರೆ.
ಪ್ರಕರಣದ ತನಿಖೆಗಾಗಿ ಎಸ್.ಪಿ ಅವರಿಂದ ನಿಯೋಜಿಸಲ್ಪಟ್ಟಿದ್ದ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್‌ಪೆಕ್ಟರ್ ಸತೀಶ್ ಜಿ.ಜೆ‌ ಅವರು ಬೆಂಗಳೂರಿನ ನ್ಯಾಯಾಲಯಕ್ಕೆ ಈ ಆರೋಪ ಪಟ್ಟಿ ಸಲ್ಲಿಸಿದ್ದಾರೆ.

ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಬಿಜೆಪಿ ಯುವ ಮೋರ್ಚಾದ ನಾಯಕರುಗಳಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋದ್ ಉಜಿರೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ಈ ಪೈಕಿ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಪೊಲೀಸ್ ಠಾಣೆಯಲ್ಲಿ ನಡೆದ ಪ್ರತಿಭಟನೆಯ ವೇಳೆ ಶಾಸಕ ಹರೀಶ್ ಪೂಂಜ ಅವರು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದೂ ಮಾತ್ರವಲ್ಲದೆ ಪೊಲೀಸರ ವಿರುದ್ಧ ಅಸಂವಿಧಾನಿಕ ಪದ ಬಳಸಿ‌ ನಿಂದಿಸಿದ್ದರು ಎಂದು ಒಂದು ಪ್ರಕರಣ ದಾಖಲಾಗಿತ್ತು.
ಈ ವಿಚಾರವನ್ನು ಖಂಡಿಸಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಆಡಳಿತ ಸೌಧದ ಬಳಿ ನಡೆದಿದ್ದ ಪ್ರತಿಭಟನೆಯ ವೇಳೆ ಮತ್ತೆ ಶಾಸಕರು ಪೊಲೀಸರ ವಿರುದ್ಧವೇ ಹರಿಹಾಯ್ದ ಬಗ್ಗೆ ಎರಡನೇ ಎಫ್ ಐ ಆರ್ ದಾಖಲಾಗಿತ್ತು.


ಈ ಸಂಬಂಧವಾಗಿ ಶಾಸಕರಿಗೆ ನೋಟೀಸು ನೀಡಿ ಠಾಣೆಗೆ ವಿಚಾರಣೆಗೆ ಕರತರಲು ಪೊಲೀಸರು ಮನೆಗೆ ತೆರಳಿದ್ದ ವೇಳೆ ಅಲ್ಲೂ ಸಾವಿರಾರು ಜನ ಜಮಾಯಿಸಿ ಹೈ ಡ್ರಾಮಾ ನಡೆದಿತ್ತು.
ಈ ಎರಡೂ ಪ್ರಕರಣಗಳ ತ್ವರಿತ ತನಿಖೆಗೆ ಎಸ್.ಪಿ‌ ಅವರು ನಿಯೋಜಿಸಿದ ತಂಡ ಇದೀಗ ತನಿಖೆ ಪೂರ್ತಿಗೊಳಿಸಿದ್ದು, ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Related posts

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಇಳಂತಿಲ : ಪ್ರಶಿಕ್ಷಣ ವರ್ಗ – ಹಿಂದೂ ಸಂಗಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಪಿಲ್ಯ: ಬರಾಯದಲ್ಲಿ ಕಾಲುಸಂಕ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆ ಗ್ರಾ.ಪಂ. ವತಿಯಿಂದ ಬೀದರ್ ಜಿಲ್ಲೆಗೆ ಅಧ್ಯಯನ ಪ್ರವಾಸ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ಸ್ ವತಿಯಿಂದ ವಾಹನ ಪೂಜೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರ ಬಿಜೆಪಿ ಯುವಮೋರ್ಚಾ ಸಂಚಾಲಕರಾಗಿ ಹರಿಪ್ರಸಾದ್

Suddi Udaya
error: Content is protected !!