September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

ಬೆಳ್ತಂಗಡಿ: ಅನ್ನ ಬಸಿಯುತ್ತಿರುವಾಗ ಆಕಸ್ಮಿಕವಾಗಿ ಅನ್ನದ ಪಾತ್ರೆಯು ಮೈ ಮೇಲೆ ಬಿದ್ದು ತೀವ್ರ ಸುಟ್ಟ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸದ್ಯ ಚೇತರಿಸಿಕೊಳ್ಳುತ್ತಿರುವ ಕೊಯ್ಯೂರು ಗ್ರಾಮದ ಕಿರಿಯಾಡಿ ಕೊಡಂಗೆ ನಿವಾಸಿ ಯಶೋಧರ ಇವರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಚಿಕಿತ್ಸಾ ಸಹಾಯಾರ್ಥವಾಗಿ ರೂ.20,000/-ದ ಚೆಕ್ ನ್ನು ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ನಿರ್ದೇಶಕ ಆನಂದ ಗೌಡ ಉಜಿರೆ ಇವರ ಮೂಲಕ ಫಲಾನುಭವಿಯ ಪತ್ನಿಗೆ ಹಸ್ತಾಂತರ ಮಾಡಲಾಯಿತು.


ಈ ಸಂಧರ್ಭದಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿಕಟಪೂರ್ವ ಕಾರ್ಯದರ್ಶಿ ಹಾಗೂ ಸ್ಪಂದನಾ ಸೇವಾ ಸಂಘದ ಸಂಚಾಲಕ ಮೋಹನ ಗೌಡ ಕೊಯ್ಯೂರು, ಸೀತಾರಾಮ್ ಸೌರಭ ಬೆಳಾಲು, ವಾಣಿ ಸೌಹಾರ್ದ- ಕೋ ಆಪರೇಟಿವ್ ಸೊಸೈಟಿಯ ನಿರ್ದೇಶಕ ಸುರೇಶ್ ಕೌಡಂಗೆ, ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರುಗಳಾದ ಮಹಾಬಲ ಗೌಡ ಮತ್ತು ಮೀನಾಕ್ಷಿ ಮಹಾಬಲ ಗೌಡ ಉಪಸ್ಥಿತರಿದ್ದರು.

Related posts

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ಬೆಳ್ತಂಗಡಿ: ಹೈಟೆನ್ಶನ್ ಜಂಪರ್ ತುಂಡಾಗಿ ಬಿದ್ದು ಬೆಂಕಿ ಅವಘಡ

Suddi Udaya

ರಾಜ್ಯದ ಕಾಂಗ್ರೆಸ್ ಸರಕಾರದ ದುರಾಡಳಿತದ ವಿರುದ್ದ ಕಳಿಯ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya
error: Content is protected !!